ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

ನವದೆಹಲಿ : ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

Add Asianetnews Kannada as a Preferred SourcegooglePreferred

ಭಾರತದ ಅಂಡರ್ 19 ಕ್ರಿಕೆಟ್ ತಂಡವು ವಿಶ್ವ ಕಪ್ ಗೆಲ್ಲುತ್ತಿದ್ದಂತೆ ಬಿಸಿಸಿಐ ತಂಡಕ್ಕೆ ಭಾರಿ ಬಹುಮಾನದ ಮೊತ್ತವನ್ನು ಘೋಷಿಸಿದೆ. 

ಅಲ್ಲದೇ ಮುಖ್ಯ ಕೋಚ್ ರಾಹುಲ್ ದ್ರಾವಿಡ್’ಗೆ ಈ ಕ್ರೆಡಿಟ್ ಹೋಗುತ್ತಿದ್ದು, ಅತ್ಯುದ್ಭುತವಾದ ಪ್ರದರ್ಶನಕ್ಕಾಗಿ 50 ಲಕ್ಷ ಹಣವನ್ನು ಅವರಿಗೆ ನೀಡಲಾಗುತ್ತಿದೆ.

ಅಲ್ಲದೇ ತಂಡದ ಪ್ರತೀ ಆಟಗಾರನಿಗೂ ಕೂಡ 30 ಲಕ್ಷ ಹಣವನ್ನು ಬಹುಮಾನವಾಗಿ ನೀಡಲಾಗುತ್ತಿದೆ. ಸಹಾಯಕ ಸಿಬ್ಬಂದಿಗೆ 20 ಲಕ್ಷ ಹಣವನ್ನು ನೀಡಲಾಗುತ್ತಿದೆ.