ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗಾಗಿ ಟೀಂ ಇಂಡಿಯಾ ಪ್ರಕಟಿಸಲಾಗಿದೆ. ಭುವನೇಶ್ವರ್ ಕುಮಾರ್‌ಗೆ ಕೊಕ್ ನೀಡಿದರೆ, ಎಂ.ಎಸ್.ಧೋನಿ ಹಾಗೂ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಇಬ್ಬರು ಕನ್ನಡಿಗರಿಗೆ ಅವಕಾಶ ನೀಡಲಾಗಿದೆ. 

ಮುಂಬೈ(ಆ.29): ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಸೆಪ್ಟೆಂಬರ್ 15 ರಿಂದ ಆರಂಭಗೊಳ್ಳಲಿರುವ ಈ ಸರಣಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ಭುವನೇಶ್ವರ್ ಕುಮಾರ್ ಬದಲು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಎಂ.ಎಸ್.ಧೋನಿ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Scroll to load tweet…

ಭಾರತ-ಸೌತ್ ಆಫ್ರಿಕಾ ಟಿ20 ಸರಣಿ:
ಸೆಪ್ಟೆಂಬರ್ 15; 1ನೇ ಟಿ20: ಧರ್ಮಶಾಲಾ
ಸೆಪ್ಟೆಂಬರ್ 18; 2ನೇ ಟಿ20: ಮೊಹಾಲಿ
ಸೆಪ್ಟೆಂಬರ್ 22; 3ನೇ ಟಿ20: ಬೆಂಗಳೂರು