ಇಲ್ಲಿನ ಎಸ್‌ಎನ್‌ಡಿಆರ್ ಒಡೆಯರ್ ಮೈದಾನದಲ್ಲಿ ನಡೆದ ಮೊದಲ ಸೆಮೀಸ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಬೆಂಗಳೂರು 9 ವಿಕೆಟ್‌ಗೆ 138 ರನ್‌ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮೈಸೂರು 20 ಓವರ್‌ಗಳಲ್ಲಿ 9 ವಿಕೆಟ್‌ಗೆ 118 ರನ್‌ಗಳಿಸಲಷ್ಟೇ ಶಕ್ತವಾಯಿತು.

ಮೈಸೂರು[ಸೆ.05]: ಶ್ರೇಯಸ್ ಗೋಪಾಲ್ (13ಕ್ಕೆ3) ಮತ್ತು ಆನಂದ್ ದೊಡ್ಡಮನಿ (16ಕ್ಕೆ2) ಅದ್ಭುತ ಪ್ರದರ್ಶನದ ನೆರವಿನಿಂದ ಬೆಂಗಳೂರು ಬ್ಲಾಸ್ಟರ್ಸ್, 7ನೇ ಆವೃತ್ತಿಯ ಕೆಪಿಎಲ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 20 ರನ್‌ಗಳ ಗೆಲುವು ಸಾಧಿಸಿದೆ.

Add Asianetnews Kannada as a Preferred SourcegooglePreferred

ಇದರೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್ ಲೀಗ್‌ನಲ್ಲಿ ಫೈನಲ್ ಪ್ರವೇಶಿಸಿದೆ. ಮಂಗಳವಾರ ಇಲ್ಲಿನ ಎಸ್‌ಎನ್‌ಡಿಆರ್ ಒಡೆಯರ್ ಮೈದಾನದಲ್ಲಿ ನಡೆದ ಮೊದಲ ಸೆಮೀಸ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಬೆಂಗಳೂರು 9 ವಿಕೆಟ್‌ಗೆ 138 ರನ್‌ಗಳಿಸಿತು.

ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮೈಸೂರು 20 ಓವರ್‌ಗಳಲ್ಲಿ 9 ವಿಕೆಟ್‌ಗೆ 118 ರನ್‌ಗಳಿಸಲಷ್ಟೇ ಶಕ್ತವಾಯಿತು. ಮೈಸೂರು ಪರ ಆರಂಭಿಕ ಅರ್ಜುನ್ ಹೊಯ್ಸಳ (52) ರನ್‌ಗಳಿಸಿದರು.
ಉಳಿದಂತೆ 8 ಬ್ಯಾಟ್ಸ್‌ಮನ್‌ಗಳು ಒಂದಂಕಿ ಮೊತ್ತ ದಾಟಲಿಲ್ಲ.

ಸಂಕ್ಷಿಪ್ತ ಸ್ಕೋರ್:

ಬೆಂಗಳೂರು 138/9,
ಮೈಸೂರು ವಾರಿಯರ್ಸ್ 118/9