ಮಾಜಿ ಅಂತರಾಷ್ಟ್ರೀಯ ಕಬಡ್ಡಿ ಪಟು ಹಾಗೂ ಅರ್ಜುನ ಪ್ರಶಸ್ತಿ ವಿಜೇತ ರಣ್'ಧೀರ್ ಸಿಂಗ್ ಮಾರ್ಗದರ್ಶನದಲ್ಲಿ ಈ ಯುವ ತಂಡದ ಆಟಗಾರರು ಈಗಾಗಲೇ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಬೆಂಗಳೂರು(ಜು.16): ಸ್ಟಾರ್ ರೈಡರ್ ರೋಹಿತ್ ಕುಮಾರ್, 5ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌'ನಲ್ಲಿ ಬೆಂಗಳೂರು ಬುಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಅನುಭವಿ ಡಿಫೆಂಡರ್ ರವೀಂದರ್ ಪೆಹಲ್ ಅವರಿಗೆ ಉಪ ನಾಯಕನ ಜವಾಬ್ದಾರಿ ನೀಡಲಾಗಿದೆ ಎಂದು ವರದಿಯಾಗಿದೆ.

Add Asianetnews Kannada as a Preferred SourcegooglePreferred

ಇದೇ 28 ರಿಂದ ಆರಂಭವಾಗಲಿರುವ ಕಬಡ್ಡಿ ಲೀಗ್‌'ನಲ್ಲಿ ಬೆಂಗಳೂರು ತಂಡ ಪ್ರಭಾವಿ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ. ಮಾಜಿ ಅಂತರಾಷ್ಟ್ರೀಯ ಕಬಡ್ಡಿ ಪಟು ಹಾಗೂ ಅರ್ಜುನ ಪ್ರಶಸ್ತಿ ವಿಜೇತ ರಣ್'ಧೀರ್ ಸಿಂಗ್ ಮಾರ್ಗದರ್ಶನದಲ್ಲಿ ಈ ಯುವ ತಂಡದ ಆಟಗಾರರು ಈಗಾಗಲೇ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಕರ್ನಾಟಕದ ಹರೀಶ್ ನಾಯಕ್, ಗುರ್ವೀಂದರ್ ಸಿಂಗ್, ಅಂಕಿತ್ ಸಂಗ್ವಾನ್, ಪ್ರೀತಮ್ ಚಿಲ್ಲಾರ್ ಮತ್ತು ಆಶೀಶ್ ಕುಮಾರ್ ಉತ್ತಮ ಪ್ರದರ್ಶನದ ಭರವಸೆ ಮೂಡಿಸಿದ್ದಾರೆ.