ಇನ್ನು ಮೂರನೇ ಪಂದ್ಯವು ಅಕ್ಟೋಬರ್ 29ರಂದು ಕಾನ್ಪುರದಲ್ಲಿ ನಡೆಯಲಿದ್ದು ಸರಣಿ ಗೆಲುವಿಗಾಗಿ ಉಭಯ ತಂಡಗಳು ಕಾದಾಡಲಿವೆ.
ಪುಣೆ(ಅ.25): ಭುವನೇಶ್ವರ್ ಕುಮಾರ್ ಮಾರಕ ದಾಳಿ ಹಾಗೂ ಧವನ್ ಮತ್ತು ದಿನೇಶ್ ಕಾರ್ತಿಕ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಭರ್ಜರಿ ಜಯಭೇರಿ ಬಾರಿಸಿದೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-1 ಅಂತರದ ಸಮಬಲ ಸಾಧಿಸಿದೆ.
ನ್ಯೂಜಿಲೆಂಡ್ ನೀಡಿದ್ದ 231 ರನ್'ಗಳ ಗುರಿಯನ್ನು ಭಾರತ ಕೇವಲ 4 ವಿಕೆಟ್ ಕಳೆದುಕೊಂಡ ಜಯದ ನಗೆ ಬೀರಿದೆ. ಟೀಂ ಇಂಡಿಯಾ ಪರ ಶಿಖರ್ ಧವನ್ 68 ಹಾಗೂ ದಿನೇಶ್ ಕಾರ್ತಿಕ್ ಅಜೇಯ 64 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಈ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ನ್ಯೂಜಿಲೆಂಡ್'ಗೆ ವೇಗಿ ಭುವನೇಶ್ವರ್ ಕುಮಾರ್(45/3) ಮಾರಕವಾಗಿ ಪರಿಣಮಿಸಿದರು. ನ್ಯೂಜಿಲೆಂಡ್ ಪರ ಹೆನ್ರಿ ನಿಕೋಲಸ್(42) ಹಾಗೂ ಕಾಲಿನ್ ಡಿ ಗ್ರಾಂಡ್'ಹೋಂ(41) ಹೊರತು ಪಡಿಸಿದಂತೆ ಬೇರೆ ಯಾವ ಬ್ಯಾಟ್ಸ್'ಮನ್'ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರಲಿಲ್ಲ.
ಭುವನೇಶ್ವರ್ ಕುಮಾರ್ 3 ವಿಕೆಟ್ ಪಡೆದರೆ, ಚಾಹಲ್ ಹಾಗೂ ಬುಮ್ರಾ ತಲಾ 2 ವಿಕೆಟ್ ಪಡೆದರು. ಇನ್ನು ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಹಂಚಿಕೊಂಡರು.
ಇನ್ನು ಮೂರನೇ ಪಂದ್ಯವು ಅಕ್ಟೋಬರ್ 29ರಂದು ಕಾನ್ಪುರದಲ್ಲಿ ನಡೆಯಲಿದ್ದು ಸರಣಿ ಗೆಲುವಿಗಾಗಿ ಉಭಯ ತಂಡಗಳು ಕಾದಾಡಲಿವೆ.
ಸಂಕ್ಷಿಪ್ತ ಸ್ಕೋರ್:
ನ್ಯೂಜಿಲೆಂಡ್: 230/9(50 ಓ)
ಹೆನ್ರಿ ನಿಕೋಲಸ್ :42
ಕಾಲಿನ್ ಡಿ ಗ್ರಾಂಡ್'ಹೋಂ :41
ಭುವನೇಶ್ವರ್ ಕುಮಾರ್ : 45/3
ಭಾರತ: 232/4(46 ಓ)
ಶಿಖರ್ ಧವನ್ : 68
ದಿನೇಶ್ ಕಾರ್ತಿಕ್ : 64*
ಆ್ಯಡಂ ಮಿಲ್ನೆ: 21/1
