Asianet Suvarna News Asianet Suvarna News

BCCI ಬಳಿ ಭೇಷರತ್ ಕ್ಷಮೆಯಾಚಿಸಿದ ದಿನೇಶ್ ಕಾರ್ತಿಕ್!

ಟೀಂ ಇಂಡಿಯಾ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಬಿಸಿಸಿಐ ಬಳಿ ಭೇಷರತ್ ಕ್ಷಮೆ ಯಾಚಿಸಿದ್ದಾರೆ. ಸೈಲೆಂಟ್ ಆಗಿದ್ದ ಡಿಕೆ ಇದ್ದಕ್ಕಿದ್ದಂತೆ ಬಿಗ್ ಬಾಸ್ ಕೆಂಗಣ್ಣಿಗೆ ಗುರಿಯಾಗಿದ್ದು ಯಾಕೆ? ಇಲ್ಲಿದೆ ವಿವರ.

Cricketer Dinesh karthik sent unconditional apology letter to bcci
Author
Bengaluru, First Published Sep 8, 2019, 6:15 PM IST

ಮುಂಬೈ(ಸೆ.08): ಬಿಸಿಸಿಐ ಅನುಮತಿ ಇಲ್ಲದೆ ಕೆರಿಬಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಕಾಣಿಸಿಕೊಂಡು ಸಂಕಷ್ಟಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಇದೀಗ ಭೇಷರತ್ ಕ್ಷಮೆ ಯಾಚಿಸಿದ್ದಾರೆ.  ಶಾರುಖ್ ಖಾನ್ ಮಾಲೀಕತ್ವದ ಟ್ರಿನಿಬ್ಯಾಗೋ ನೈಟ್ ರೈಡರ್ಸ್ ತಂಡದ ಡ್ರೆಸ್ಸಿಂಗ್ ರೂಂನಲ್ಲಿ ಪ್ರತ್ಯಕ್ಷರಾಗೋ ಮೂಲಕ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದೆ. ಹೀಗಾಗಿ ಶೋಕಾಸ್ ನೊಟೀಸ್ ನೀಡಿತ್ತು.

ಇದನ್ನೂ ಓದಿ: ಕೆರಿಬಿಯನ್ ಲೀಗ್ ಜೊತೆ ಕಾಣಿಸಿಕೊಂಡ ಕಾರ್ತಿಕ್, BCCIನಿಂದ ನೊಟೀಸ್!

ಬಿಸಿಸಿಐ ನೊಟೀಸ್‌ಗೆ ಉತ್ತರಿಸಿದ ಕಾರ್ತಿಕ್ ಭೇಷರತ್ ಕ್ಷಮೆಯಾಚಿಸಿದ್ದಾರೆ. ನಾನು ಟ್ರಿನಿಬ್ಯಾಗೋ ತಂಡದ ಯಾವುದೇ ಚಟುವಟಿಕೆ ಹಾಗೂ ಆಟದಲ್ಲಿ ಪಾಲ್ಗೊಂಡಿಲ್ಲ. ಫ್ರಾಂಚೈಸಿ ಮನವಿ ಮೇರೆಗೆ  ತಂಡದ ಜೊತೆ ಕಾಣಿಸಿಕೊಂಡಿದ್ದೆ ಎಂದು ಬಿಸಿಸಿಐಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಇಂಡೋ-ಆಫ್ರಿಕಾ ಟಿ20: ಬೆಂಗಳೂರು ಪಂದ್ಯದ ಟಿಕೆಟ್ ಕೇವಲ ₹500 ಮಾತ್ರ..!

ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾದಿಂದ ಅವಕಾಶ ವಂಚಿತರಾಗಿರುವ ದಿನೇಶ್ ಕಾರ್ತಿಕ್, ವೆಸ್ಟ್ ಇಂಡೀಸ್ ಹಾಗೂ  ಸೌತ್ ಆಫ್ರಿಕಾ ಸರಣಿಗೂ ಆಯ್ಕೆಯಾಗಿಲ್ಲ.

Follow Us:
Download App:
  • android
  • ios