"ಆಸ್ಟ್ರೇಲಿಯಾ ಅತ್ಯುತ್ತಮ ಆಟದ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ"

ನವದೆಹಲಿ(ಮಾ.22): ಭಾರತೀಯ ಪಿಚ್‌'ಗಳಲ್ಲಿ ಆತಿಥೇಯ ತಂಡವನ್ನು ಒತ್ತಡಕ್ಕೆ ಸಿಲುಕಿಸಿರುವ ಆಸ್ಟ್ರೇಲಿಯಾ ತಂಡಕ್ಕೆ ತಕ್ಕ ಗೌರವ ಸಲ್ಲಬೇಕು ಎಂದು ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

‘‘ಸೌರವ್ ಗಂಗೂಲಿ, ಹರ್ಭಜನ್ ಸಿಂಗ್ ಸೇರಿದಂತೆ ಹಲವು ದಿಗ್ಗಜ ಕ್ರಿಕೆಟಿಗರು ಭಾರತ ಸರಣಿ ಕ್ಲೀನ್ ಸ್ವೀಪ್ ಮಾಡಲಿದೆ ಎಂದು ಭವಿಷ್ಯ ನುಡಿದಿದ್ದರು. ಆದರೆ, ಆಸ್ಟ್ರೇಲಿಯಾ ಅತ್ಯುತ್ತಮ ಆಟದ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ. ವಿಶ್ವದ ಎರಡು ಶ್ರೇಷ್ಠ ತಂಡಗಳ ನಡುವೆ ಈ ರೀತಿಯ ಪೈಪೋಟಿ, ಆಟದ ಜನಪ್ರಿಯತೆಯನ್ನು ಹೆಚ್ಚಿಸುತ್ತದೆ’’ ಎಂದು ದೆಹಲಿ ಮೂಲದ ಆಟಗಾರ ಗಂಭೀರ್ ಹೇಳುವ ಮೂಲಕ ಆಸೀಸ್ ಆಟಗಾರರನ್ನು ಹೊಗಳಿ ಅಟ್ಟಕ್ಕೇರಿಸಿದ್ದಾರೆ.

ಸ್ಲೆಡ್ಜಿಂಗ್ ಕ್ರೀಡೆಯ ಒಂದು ಭಾಗವಾಗಿದ್ದು, ಅದು ತನ್ನ ಮಿತಿಯನ್ನು ಮೀರಬಾರದಷ್ಟೆ ಎಂದು 35 ವರ್ಷದ ಎಡಗೈ ಬ್ಯಾಟ್ಸ್'ಮನ್ ಅಭಿಪ್ರಾಯಪಟ್ಟಿದ್ದಾರೆ.