Asianet Suvarna News Asianet Suvarna News

ಇಂಜುರಿಯಿಂದ ಚೇತರಿಕೆ-ಹಾರ್ದಿಕ್ ಪಾಂಡ್ಯ ಮತ್ತೆ ಅಖಾಡಕ್ಕೆ!

ಏಷ್ಯಾಕಪ್ ಟೂರ್ನಿಯಲ್ಲಿ ಇಂಜುರಿಗೆ ತುತ್ತಾಗಿದ್ದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಕಣಕ್ಕಿಳಿಯುತ್ತಿದ್ದಾರೆ. ಡಿಸೆಂಬರ್ 14 ರಂದು ಪಾಂಡ್ಯ ಮತ್ತೆ ಮೈದಾನದಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.

Hardik Pandya included to Baroda squad for Ranji Trophy  against Mumbai
Author
Bengaluru, First Published Dec 10, 2018, 9:39 PM IST

ಬರೋಡಾ(ಡಿ.10): ಏಷ್ಯಾಕಪ್ ಟೂರ್ನಿಯಲ್ಲಿ ಇಂಜುರಿ ತುತ್ತಾಗಿ ಮೂರು ತಿಂಗಳ ಕಾಲಲ ವಿಶ್ರಾಂತಿಯಲ್ಲಿದ್ದ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೆ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಡಿಸೆಂಬರ್ 1 4 ರಂದು ಆರಂಭವಾಗಲಿರುವ ಮುಂಬೈ ವಿರುದ್ಧ ರಣಜಿ ಪಂದ್ಯದಲ್ಲಿ ಹಾರ್ದಿಕ್ ಕಣಕ್ಕಿಳಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಛೀ..ರವಿಶಾಸ್ತ್ರಿಗಳ ಬಾಯಲ್ಲಿ ಎಂಥಾ ಅಶ್ಲೀಲ ಮಾತು...ವಿಡಿಯೋ ವೈರಲ್

ಬರೋಡಾ ರಣಜಿ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿದೆ. ಈ ಮೂಲಕ ಇಂಜುರಿ ಬಳಿಕ ಮೊದಲ ಪಂದ್ಯಕ್ಕೆ ಪಾಂಡ್ಯ ರೆಡಿಯಾಗಿದ್ದಾರೆ. ಬರೋಡಾ ಕ್ರಿಕೆಟ್ ಸಂಸ್ಥೆ 15 ಸದಸ್ಯರ ರಣಜಿ ತಂಡ ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯ ಹಾಗೂ ಯುಸುಫ್ ಪಠಾಣ್‌ಗೂ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಅಚ್ಚರಿಯಾದರೂ ನಿಜ- ದ್ರಾವಿಡ್-ಪೂಜಾರ ಇಬ್ಬರ ಅಂಕಿ ಅಂಶ ಒಂದೇ!

ಕಳೆದ ಸೆಪ್ಟೆಂಬರ್‌ನಲ್ಲಿ ಹಾರ್ದಿಕ್ ಪಾಂಡ್ಯ ಬೆನ್ನು ನೋವಿಗೆ ತುತ್ತಾಗಿದ್ದರು. ಹೀಗಾಗಿ ಏಷ್ಯಾಕಪ್ ಟೂರ್ನಿಯಿಂದ ನಿರ್ಗಮಿಸಿದರು. ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ಪಾಂಡ್ಯ ಸದ್ಯ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದಲೂ ಹೊರಗುಳಿದಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾ ಕ್ರಿಕೆಟಿಗರಿಗೆ ಅಭ್ಯಾಸಕ್ಕಿಂತ ವಿಶ್ರಾಂತಿ ಬೇಕಿದೆ: ಕೋಚ್ ಶಾಸ್ತ್ರಿ!

Follow Us:
Download App:
  • android
  • ios