ಭೀಕರ ಪ್ರವಾಹಕ್ಕೆ ಅಸ್ಸಾಂ ನಲುಗಿದೆ. ಅಸ್ಸಾಂನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇದೀಗ ಅಸ್ಸಾಂಗೆ ನೆರವಿನ ಅಗತ್ಯವಿದೆ. ಇದರ ಬೆನ್ನಲ್ಲೇ ಅಥ್ಲೀಟ್ ಹಿಮಾ ದಾಸ್ ಪರಿಹಾರ ನಿಧಿಗೆ ಅರ್ಧ ಸಂಬಳ ನೀಡಿದ್ದಾರೆ.

ಗುವಾಹಟಿ(ಜು.17): ಅಸ್ಸಾಂ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ತಾರಾ ಅಥ್ಲೀಟ್‌ ಹಿಮಾ ದಾಸ್‌ ತಮ್ಮ ಅರ್ಧ ತಿಂಗಳ ಸಂಬಳವನ್ನು ಮುಖ್ಯಮಂತ್ರಿ ಪ್ರವಾಹ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ. ಟ್ವೀಟರ್‌ನಲ್ಲಿ ಈ ವಿಷಯ ಹಂಚಿಕೊಂಡಿರುವ ಹಿಮಾ, ಕಾರ್ಪೋರೇಟ್‌ ಸಂಸ್ಥೆ ಹಾಗೂ ವೈಯಕ್ತಿಕವಾಗಿ ಪ್ರತಿಯೊಬ್ಬರೂ ನೆರವು ನೀಡುವಂತೆ ಕೋರಿದ್ದಾರೆ. ಹಿಮಾ, ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿಯಾಗಿದ್ದಾರೆ. ಯುವ ಅಥ್ಲೀಟ್‌ನ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Scroll to load tweet…

ಕಳೆದ ವಾರವಾರ ಪೋಜ್ನಾನ್‌ ಗ್ರ್ಯಾನ್‌ ಪ್ರಿ, ಕುಟ್ನೊ ಅಥ್ಲೆಟಿಕ್ಸ್‌ ಕೂಟ ಹಾಗೂ ಚೆಕ್‌ ಗಣರಾಜ್ಯದ ಕ್ಲಾಡ್ನೊ ಅಥ್ಲೆಟಿಕ್ಸ್‌ ಕೂಟದಲ್ಲಿ ಹಿಮಾ ದಾಸ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ 11 ದಿನಗಳಲ್ಲಿ 3 ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. 

Scroll to load tweet…