140 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ವಾಯು ಮಾಲಿನ್ಯದ ಕಾರಣದಿಂದ 26 ನಿಮಿಷಗಳ ಕಾಲ ಪಂದ್ಯವನ್ನು ರದ್ದು ಪಡಿಸಿದ್ದು ಮೊದಲ ಉದಾಹರಣೆ ಎನಿಸಿಕೊಂಡಿತು.

ದುಬೈ(ಡಿ.09): ಇತ್ತೀಚೆಗೆ ‘ಭಾರತ- ಶ್ರೀಲಂಕಾ ನಡುವೆ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ವೇಳೆ ವಾಯುಮಾಲಿನ್ಯದ ಕಾರಣ ಉಂಟಾಗಿದ್ದ ವಿವಾದದ ಕುರಿತು ಫೆಬ್ರವರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚಿಸುವುದಾಗಿ ಐಸಿಸಿ ತಿಳಿಸಿದೆ. ಅಲ್ಲದೇ ‘ವಿಷಯದಲ್ಲಿ ಈ ರೀತಿಯ ಪರಿಸ್ಥಿತಿ ಉಂಟಾದಾಗ ಅನುಸರಿಸಬೇಕಾದ ನಿಯಮಗಳನ್ನು ರಚಿಸುವುದಾಗಿ ಹೇಳಿದೆ.

Add Asianetnews Kannada as a Preferred SourcegooglePreferred

ವಾಯು ಮಾಲಿನ್ಯದ ಕಾರಣ ಲಂಕಾ ಆಟಗಾರರು ಮಾಸ್ಕ್ ಧರಿಸಿ ಕ್ಷೇತ್ರರಕ್ಷಣೆ ಮಾಡಿದ್ದರು. ಕೆಲಕಾಲ ಆಟವನ್ನು ಸ್ಥಗಿತಗೊಳಿಸಿದ್ದರು. ಲಂಕಾದ ಲಕ್ಮಲ್, ಭಾರತದ ಶಮಿ ಮೈದಾನ ದಲ್ಲೇ ವಾಂತಿ ಮಾಡಿಕೊಂಡಿದ್ದರು. ಐಸಿಸಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

140 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ವಾಯು ಮಾಲಿನ್ಯದ ಕಾರಣದಿಂದ 26 ನಿಮಿಷಗಳ ಕಾಲ ಪಂದ್ಯವನ್ನು ರದ್ದು ಪಡಿಸಿದ್ದು ಮೊದಲ ಉದಾಹರಣೆ ಎನಿಸಿಕೊಂಡಿತು.