Asianet Suvarna News Asianet Suvarna News

ಕನ್ನಡಿಗ ಕರುಣ್ ನಾಯರ್’ಗೆ ಆಗುತ್ತಿದೆಯಾ ಮೋಸ..?

ದೇಶಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದರೂ ಆಯ್ಕೆಗಾರರ ಮನ ಗೆಲ್ಲುವಲ್ಲಿ ಕರುಣ್ ಪದೇ ಪದೇ ವಿಫಲವಾಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆದರೂ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲು ವಿಫಲರಾದರು.

ಬೆಂಗಳೂರು[ಅ.03]: ಭಾರತ ಪರ ಟೆಸ್ಟ್ ಕ್ರಿಕೆಟ್’ನಲ್ಲಿ ತ್ರಿಶತಕ ಸಿಡಿಸಿದ ಎರಡನೇ ಭಾರತೀಯ ಬ್ಯಾಟ್ಸ್’ಮನ್ ಎನ್ನುವ ದಾಖಲೆ ಬರೆದ ಕರುಣ್ ನಾಯರ್ ವೆಸ್ಟ್’ಇಂಡೀಸ್ ಎದುರಿನ ಟೆಸ್ಟ್ ಸರಣಿಯಲ್ಲಿ ಸ್ಥಾನಪಡೆಯಲು ವಿಫಲವಾಗಿದ್ದಾರೆ.

ದೇಶಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದರೂ ಆಯ್ಕೆಗಾರರ ಮನ ಗೆಲ್ಲುವಲ್ಲಿ ಕರುಣ್ ಪದೇ ಪದೇ ವಿಫಲವಾಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆದರೂ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲು ವಿಫಲರಾದರು. ಕರಣ್ ಅವರಿಗೆ ಅವರಿಗೆ ಆಯ್ಕೆ ಸಮಿತಿ ಮಣೆ ಹಾಕದಿರುವುದಕ್ಕೆ ಮಾಜಿ ಕ್ರಿಕೆಟಿಗರು ಕೂಡಾ ಕಿಡಿಕಾರಿದ್ದಾರೆ. ಇದನ್ನೆಲ್ಲಾ ಗಮನಿಸಿದರೆ, ಕರುಣ್ ನಾಯರ್’ಗೆ ಮೋಸವಾಗುತ್ತಿದೆಯಾ ಎನ್ನುವ ಅನುಮಾನ ದಟ್ಟವಾಗ ತೊಡಗಿದೆ.

Video Top Stories