ಮೈಸೂರಿನಲ್ಲಿ ಭಾರತ ಎ ಹಾಗೂ ಸೌತ್ ಆಫ್ರಿಕಾ ಎ ನಡುವಿನ ಟೆಸ್ಟ್ ಪಂದ್ಯ ನಡೆಯಲಿದೆ. ರಾಜ್ಯದ ಕರುಣ್ ನಾಯರ್, ಕೆ.ಗೌತಮ್ ತಂಡದಲ್ಲಿದ್ದಾರೆ. ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರುವ ಶುಭ್ಮನ್ ಗಿಲ್ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿದೆ.
ಮೈಸೂರು(ಸೆ.17): ಮಂಗಳವಾರದಿಂದ (ಸೆ.17) ಇಲ್ಲಿನ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಭಾರತ ‘ಎ’ ಹಾಗೂ ದಕ್ಷಿಣ ಆಫ್ರಿಕಾ ‘ಎ’ 2ನೇ ಹಾಗೂ ಅಂತಿಮ ಅನಧಿಕೃತ ಟೆಸ್ಟ್ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ ‘ಎ’ 7 ವಿಕೆಟ್ ಜಯ ಸಾಧಿಸಿತ್ತು.
ಇದನ್ನೂ ಓದಿ: ರಾಹುಲ್ಗೆ ಕೊಕ್, ಗಿಲ್ಗೆ ಖುಲಾಯಿಸಿತು ಲಕ್; ಟ್ವಿಟರ್ನಲ್ಲಿ ಭರ್ಜರಿ ರೆಸ್ಪಾನ್ಸ್!
2 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಹೊಂದಿರುವ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದ ಶುಭ್ಮನ್ ಗಿಲ್, ಮೊದಲ ಪಂದ್ಯದಲ್ಲಿ ಭಾರತ ‘ಎ’ ತಂಡವನ್ನು ಮುನ್ನಡೆಸಿದ್ದರು. ಈ ಪಂದ್ಯದಲ್ಲಿ ವೃದ್ಧಿಮಾನ್ ಸಾಹ ತಂಡದ ನಾಯಕರಾಗಿದ್ದಾರೆ.
ಇದನ್ನೂ ಓದಿ: ಶುಭ್ಮನ್ ಗಿಲ್ ಯಶಸ್ಸಿನ ಹಿಂದೆ ಯುವಿ ’ಕೈವಾಡ’..!
ಮೊದಲ ಪಂದ್ಯದಲ್ಲಿ 90 ರನ್ ಗಳಿಸಿದ್ದ ಗಿಲ್, ಆಫ್ರಿಕಾ ವಿರುದ್ಧ ಟೆಸ್ಟ್ನಲ್ಲಿ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದು, ಬ್ಯಾಟಿಂಗ್ ಲಯ ಕಾಯ್ದುಕೊಳ್ಳಲು ಎದುರು ನೋಡುತ್ತಿದ್ದಾರೆ. ರಾಜ್ಯದ ಕರುಣ್ ನಾಯರ್ ಹಾಗೂ ಕೆ.ಗೌತಮ್ ಸಹ ತಂಡದಲ್ಲಿದ್ದು, ಆಕರ್ಷಕ ಪ್ರದರ್ಶನದ ಮೂಲಕ ಆಯ್ಕೆಗಾರರ ಗಮನ ಸೆಳೆಯುವ ವಿಶ್ವಾಸದಲ್ಲಿದ್ದಾರೆ. ಪಂದ್ಯ ಬೆಳಗ್ಗೆ 9.30ಕ್ಕೆ ಆರಂಭವಾಗಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.
