ಸತತ 9 ಪಂದ್ಯಗಳನ್ನು ಗೆದ್ದು ಮುನ್ನುಗ್ಗುತ್ತಿದ್ದ ಟೀಂ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬೆಂಗಳೂರಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ರೇಕ್ ಹಾಕಿತ್ತು. ಇನ್ನು ಸರಣಿಯ ಕೊನೆಯ ಏಕದಿನ ಪಂದ್ಯವು ಅಕ್ಟೋಬರ್ 01ರಂದು ನಾಗಪುರದಲ್ಲಿ ನಡೆಯಲಿದೆ.

ನವದೆಹಲಿ(ಸೆ.30): ಆಸ್ಟ್ರೇಲಿಯಾ ಕ್ರಿಕೆಟ್ ಮಾಜಿ ನಾಯಕ ಮೈಕಲ್ ಕ್ಲಾರ್ಕ ಟೀಂ ಇಂಡಿಯಾದ ಪ್ರದರ್ಶನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಆಸೀಸ್ ವಿರುದ್ಧ ಸೋತಿದ್ದರು ಟೀಂ ಇಂಡಿಯಾದ ಪ್ರದರ್ಶನವನ್ನು ಕೊಂಡಾಡಿದ್ದಾರೆ.

Add Asianetnews Kannada as a Preferred SourcegooglePreferred

'ಪ್ರಸ್ತುತ ಸಂದರ್ಭದಲ್ಲಿ ಟೀಂ ಇಂಡಿಯಾ ಅದ್ಭುತವಾಗಿ ಆಡುತ್ತಿದೆ. ಯಾರಾದರೂ ಇದು ಕೆಟ್ಟ ತಂಡ ಎಂದು ಹೇಳಿದರೆ, ಅವರ ತಲೆಯಲ್ಲಿ ಏನು ಇದೆ ಎಂದು ಹೇಳಲು ಸಾಧ್ಯವಿಲ್ಲ' ಎಂದು ಕ್ಲಾರ್ಕ್ ಹೇಳಿದ್ದಾರೆ.

ಟೀಂ ಇಂಡಿಯಾ ಈಗಾಗಲೇ 4-1 ಅಂತರ ಮುನ್ನಡೆ ಕಾಯ್ದುಕೊಳ್ಳುವುದು ಮಾತ್ರವಲ್ಲದೇ ಸರಣಿಯನ್ನೂ ಜಯಿಸಿದೆ. 'ಭಾರತ 5-0 ಅಂತರದಲ್ಲಿ ಸರಣಿಯನ್ನು ಜಯಿಸಿಬೇಕಿತ್ತು ಎಂದು ನೀವು ಬಯಸಬಹುದು. ಆದರೆ ನೀವು ಯಾವಾಗಲೂ ಎಲ್ಲಾ ಪಂದ್ಯಗಳನ್ನು ಗೆಲ್ಲಲು ಸಾಧ್ಯವಿಲ್ಲ. ಪ್ರತಿ ಪಂದ್ಯದಲ್ಲೂ ಶತಕ ಅಥವಾ 5 ವಿಕೆಟ್ ಪಡೆಯಲು ಸಾಧ್ಯವಿಲ್ಲ' ಎಂದು ಟೀಂ ಇಂಡಿಯಾ ಅಭಿಮಾನಿಗಳಿಗೆ ಕಿವಿಮಾತು ಹೇಳಿದ್ದಾರೆ.

ಸತತ 9 ಪಂದ್ಯಗಳನ್ನು ಗೆದ್ದು ಮುನ್ನುಗ್ಗುತ್ತಿದ್ದ ಟೀಂ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬೆಂಗಳೂರಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ರೇಕ್ ಹಾಕಿತ್ತು. ಇನ್ನು ಸರಣಿಯ ಕೊನೆಯ ಏಕದಿನ ಪಂದ್ಯವು ಅಕ್ಟೋಬರ್ 01ರಂದು ನಾಗಪುರದಲ್ಲಿ ನಡೆಯಲಿದೆ.