ಸರ್ಕಾರದ ಈ ನಿರ್ಲಕ್ಷ್ಯದಿಂದ ಬೇಸತ್ತ ಜಾದವ್ ಅವರ ಕುಟುಂಬವು, 1952ರಲ್ಲಿ ಫಿನ್‌'ಲೆಂಡ್‌'ನಲ್ಲಿ ನಡೆದಿದ್ದ ಒಲಿಂಪಿಕ್ಸ್‌'ನಲ್ಲಿ ದಾದಾಸಾಹೇಬ್ ಅವರು ಗೆದ್ದಿದ್ದ ಕಂಚಿನ ಪದಕವನ್ನು ಹರಾಜು ಹಾಕಲು ಮುಂದಾಗಿದ್ದು, ಸರ್ಕಾರವೇ ಇದಕ್ಕೆ ಬೆಲೆ ನಿಗದಿ ಪಡಿಸಲಿ ಎಂದಿದೆ.

ಮುಂಬೈ(ಜು.24): ಕುಸ್ತಿ ಅಕಾಡೆಮಿ ಸ್ಥಾಪನೆ ಮಾಡುವುದಾಗಿ ಹಲವು ವರ್ಷಗಳ ಹಿಂದೆಯೇ ಭರವಸೆ ನೀಡಿದ್ದರೂ ಮಹಾರಾಷ್ಟ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳದ ಕಾರಣ, ಒಲಿಂಪಿಕ್ಸ್‌'ನಲ್ಲಿ ಭಾರತಕ್ಕೆ ಮೊದಲ ಪದಕ ತಂದಿತ್ತ ಕುಸ್ತಿಪಟು ಕಶಬ ದಾದಾಸಾಹೇಬ್ ಜಾದವ್ ಅವರ ಕುಟುಂಬವು ಆ ಪದಕವನ್ನು ಹರಾಜು ಮಾಡಿ ಅಕಾಡಮಿ ಸ್ಥಾಪಿಸಲು ಚಿಂತನೆ ನಡೆಸಿರುವುದಾಗಿ ಹೇಳಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸತ್ರಾ ಜಿಲ್ಲೆಯ ಗೊಳೇಶ್ವರ್‌ನಲ್ಲಿ ಕುಸ್ತಿ ಅಕಾಡೆಮಿ ಸ್ಥಾಪಿಸಲು ಜಾದವ್ ಅವರ ಕುಟುಂಬದ ಸದಸ್ಯರು ಮಹಾರಾಷ್ಟ್ರ ಸರ್ಕಾರಕ್ಕೆ 2009ರಲ್ಲೇ ಮನವಿ ಸಲ್ಲಿಸಿದ್ದರು. ಈ ವೇಳೆ ಅದಕ್ಕೆ ಸಮ್ಮತಿ ಸೂಚಿಸಿದ್ದ ಸರ್ಕಾರ ಇಲ್ಲಿಯ ತನಕ ಆ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಸರ್ಕಾರದ ಈ ನಿರ್ಲಕ್ಷ್ಯದಿಂದ ಬೇಸತ್ತ ಜಾದವ್ ಅವರ ಕುಟುಂಬವು, 1952ರಲ್ಲಿ ಫಿನ್‌'ಲೆಂಡ್‌'ನಲ್ಲಿ ನಡೆದಿದ್ದ ಒಲಿಂಪಿಕ್ಸ್‌'ನಲ್ಲಿ ದಾದಾಸಾಹೇಬ್ ಅವರು ಗೆದ್ದಿದ್ದ ಕಂಚಿನ ಪದಕವನ್ನು ಹರಾಜು ಹಾಕಲು ಮುಂದಾಗಿದ್ದು, ಸರ್ಕಾರವೇ ಇದಕ್ಕೆ ಬೆಲೆ ನಿಗದಿ ಪಡಿಸಲಿ ಎಂದಿದೆ.