ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಅಂತ್ಯಗೊಂಡಿದೆ. ಅಂತಿಮ ಪಂದ್ಯದಲ್ಲೂ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಇಷ್ಟೇ ಅಲ್ಲ ಸರಣಿ ಕೂಡ ವಶಪಡಿಸಿಕೊಂಡಿದೆ. ತಿರುವನಂತಪುರಂ ಪಂದ್ಯದ ಹೈಲೈಟ್ಸ್ ಇಲ್ಲಿದೆ.

ತಿರುವನಂತಪುರಂ(ನ.01): ವೆಸ್ಟ್ ಇಂಡೀಸ್ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 3-1 ಅಂತರದಲ್ಲಿ ಏಕದಿನ ಸರಣಿ ವಶಪಡಿಸಿಕೊಂಡಿದೆ.

Add Asianetnews Kannada as a Preferred SourcegooglePreferred

Scroll to load tweet…

ತಿರುವನಂತಪುರಂ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಇಳಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ದಾಳಿಗೆ ಕುಸಿಯಿತು. ಕೇವಲ 31.5 ಓವರ್‌ಗಳಲ್ಲಿ 104 ರನ್‌ಗೆ ಆಲೌಟ್ ಆಯಿತು. ಈ ಮೂಲಕ ಭಾರತದ ಗೆಲುವಿಗೆ 105 ರನ್ ಸುಲಭ ಟಾರ್ಗೆಟ್ ನೀಡಿತು.

ಸುಲಭ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲಿ ಶಿಖರ್ ಧವನ್ ವಿಕೆಟ್ ಕಳೆದುಕೊಂಡಿತು. ಆದರೆ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಯಾಟದಿಂದ ಭಾರತ ಗೆಲುವಿನತ್ತ ದಾಪುಗಾಲಿಟ್ಟಿತು.

ರೋಹಿತ್ ಶರ್ಮಾ 37ನೇ ಅರ್ಧಶತಕ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 14.5 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ರೋಹಿತ್ ಅಜೇಯ ರನ್ ಸಿಡಿಸಿದರೆ ವಿರಾಟ್ ಕೊಹ್ಲಿ ಅಜೇಯ ರನ್ ಬಾರಿಸಿದರು.

ಈ ಗೆಲುವಿನೊಂದಿಗೆ ಭಾರತ 5 ಪಂದ್ಯಗಳ ಸರಣಿಯನ್ನ 3-1 ಅಂತರದಲ್ಲಿ ವಶಪಡಿಸಿಕೊಂಡಿತು. ಟೆಸ್ಟ್ ಬಳಿಕ ಏಕದಿನ ಸರಣಿ ಗೆದ್ದ ಭಾರತ ಇದೀಗ ನವೆಂಬರ್ 4 ರಿಂದ ಆರಂಭಗೊಳ್ಳಲಿರುವ ಟಿ20 ಸರಣಿಯತ್ತ ಚಿತ್ತ ನೆಟ್ಟಿದೆ.