ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡ ಭಾರತ ತಂಡ, ಐಸಿಸಿ ಕೊಡಮಾಡುವ ₹ 6.5 ಕೋಟಿ ನಗದು ಪುರಸ್ಕಾರಕ್ಕೂ ಭಾಜನವಾಗಿದೆ.

ಮುಂಬೈ(ಮಾ.28): ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದ ಟೀಂ ಇಂಡಿಯಾ ಸದಸ್ಯರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಲಾ ₹ 50 ಲಕ್ಷ ಬಹುಮಾನ ಘೋಷಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ 25 ಲಕ್ಷ ರೂಪಾಯಿ ಪಡೆದರೆ, ತಂಡದ ಬೆಂಬಲಿತ ಸಿಬ್ಬಂದಿ ತಲಾ 15 ಲಕ್ಷ ರೂಪಾಯಿ ಬಹುಮಾನಕ್ಕೆ ಭಾಜನವಾಗಿದೆ.

ಇಂದು ಮುಕ್ತಾಯ ಕಂಡ ನಾಲ್ಕನೇ ಟೆಸ್ಟ್‌ನಲ್ಲಿ 8 ವಿಕೆಟ್ ಗೆಲುವಿನೊಂದಿಗೆ 2-1ರಿಂದ ಸರಣಿ ಜಯಿಸಿದ ಭಾರತ ತಂಡ ಆ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್ ಟ್ರೋಫಿಯನ್ನೂ ತನ್ನದಾಗಿಸಿಕೊಂಡಿತು.

ಏತನ್ಮಧ್ಯೆ ಐಸಿಸಿ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡ ಭಾರತ ತಂಡ, ಐಸಿಸಿ ಕೊಡಮಾಡುವ ₹ 6.5 ಕೋಟಿ ನಗದು ಪುರಸ್ಕಾರಕ್ಕೂ ಭಾಜನವಾಗಿದೆ.