ಹುತಾತ್ಮ ಯೋಧರಿಗೆ ನಮಿಸಿದ ಕುಂಬ್ಳೆ
ಕಾನ್ಪುರ(ಸೆ.20): ಜಮ್ಮು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಡಿದ 17 ಭಾರತೀಯ ಯೋಧರ ಬಗ್ಗೆ ಟೀಂ ಇಂಡಿಯಾ ಮುಖ್ಯ ತರಬೇತುದಾರ ಅನಿಲ್ ಕುಂಬ್ಳೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಗಡಿ ನಿಯಂತ್ರಣ ರೇಖೆಯ (ಎಲ್ಒಸಿ) ಬಳಿಯಿರುವ ಉರಿಯಲ್ಲಿನ ಬ್ರಿಗೇಡ್ ಕೇಂದ್ರ ಕಚೇರಿಯ ಮೇಲೆ ಸೋಮವಾರ ನಾಲ್ವರು ಉಗ್ರರು ಭಾರೀ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಿದ್ದರು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರು ವೀರಮರಣ ಅಪ್ಪಿದ್ದರು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕುಂಬ್ಳೆ, ‘‘ಯೋಧರ ಕುಟುಂಬಗಳಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಬರಲಿ. ಯೋಧರ ತ್ಯಾಗ, ಬಲಿದಾನಕ್ಕೆ ಟೀಂ ಇಂಡಿಯಾ ನಮಿಸುತ್ತದೆ’’ ಎಂದು ತಿಳಿಸಿದರು.