Asianet Suvarna News Asianet Suvarna News

ಅಂ.ರಾ.ಕಬಡ್ಡಿ ಲೀಗ್‌ನ ಲಾಭ ಯೋಧರ ಕುಟುಂಬಕ್ಕೆ!

ಪುಲ್ವಾಮ ಭಯೋತ್ವಾದಕ ದಾಳಿಯಿಂದ ಹುತಾತ್ಮರಾದ ಕುಟುಂಬಕ್ಕೆ ಅಂತಾರಾಷ್ಟ್ರೀಯ ಕಬಡ್ಡಿ ಲೀಗ್ ಫೆಡರೇಶನ್ ನೆರವಿನ ಹಸ್ತ ಚಾಚಿದೆ. ಬಂಡಾಯ ಕಬಡ್ಡಿ ಲೀಗ್‌ನಿಂದ ಬರುವ ಆದಾಯವನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡುವುದಾಗಿ ಘೋಷಿಸಿದೆ.

International kabaddi league donate 10 percent profit to Pulwama martyrs families
Author
Bengaluru, First Published Feb 18, 2019, 9:59 AM IST

ಬೆಂಗಳೂರು(ಫೆ.18): ಇಂಡೋ-ಇಂಟರ್‌ನ್ಯಾಷನಲ್‌ ಪ್ರೀಮಿಯರ್‌ ಕಬಡ್ಡಿ ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲಿ ಗಳಿಸುವ ಲಾಭದ ಶೇ.10ರಷ್ಟನ್ನು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಕುಟುಂಬಗಳಿಗೆ ನೀಡುವುದಾಗಿ ನ್ಯೂ ಕಬಡ್ಡಿ ಫೆಡರೇಷನ್‌ ಕಾರ್ಯದರ್ಶಿ ಪ್ರಸಾದ್‌ ಬಾಬು ಘೋಷಿಸಿದ್ದಾರೆ. 

ಇದನ್ನೂ ಓದಿ: ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರ ಮಕ್ಕಳಿಗೆ ಸೆಹ್ವಾಗ್ ಉಚಿತ ಶಿಕ್ಷಣ!

ಪುಲ್ವಾಮ ಭಯೋತ್ವಾದಕ ದಾಳಿಯಿಂದ 40ಕ್ಕೂ ಹೆಚ್ಚು CRPF ಯೋಧರು ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಭಯೋತ್ವಾದಕ ಸಂಘಟನೆ ನಡೆಸಿದ ಆತ್ಮಾಹುತಿ ದಾಳಿ ಇಡೀ ಭಾರತವನ್ನೇ ಬೆಚ್ಚಿ ಬೀಳಿಸಿದೆ. ಇದೀಗ ಹುತಾತ್ಮ ಯೋಧರ ಕುಟುಂಬಕ್ಕೆ ಬಂಡಾಯ ಕಬಡ್ಡಿ ಫೆಡರೇಶನ್ ಸೇರಿದಂತೆ ಹಲವು ಕ್ರೀಡಾ ಸಂಸ್ಥೆಗಳು ನೆರವು ನೀಡುವುದಾಗಿ ಘೋಷಿಸಿದೆ. 

ಇದನ್ನೂ ಓದಿ: ಪುಲ್ವಾಮ ದಾಳಿ: ಹುತಾತ್ಮರ ಕುಟುಂಬಗಳಿಗೆ ಬಿಸಿಸಿಐ 5 ಕೋಟಿ?

ಬಂಡಾಯ ಕಬಡ್ಡಿ ಫೆಡರೇಷನ್‌ನ ಪಂದ್ಯಾವಳಿ ಈ ವರ್ಷ ಮೇ ತಿಂಗಳಲ್ಲಿ ನಡೆಯಲಿದೆ. ಇತ್ತೀಚೆಗಷ್ಟೇ ಬೆಂಗಳೂರಲ್ಲಿ ಲೀಗ್‌ಗೆ ಅಂತಿಮ ಸುತ್ತಿನ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಪ್ರೋ ಕಬಡ್ಡಿ ಲೀಗ್ ಟೂರ್ನಿಗೆ ಬಂಡಾಯವಾಗಿ ಇದೀಗ ನ್ಯೂ ಕಬಡ್ಡಿ ಫೆಡರೇಶನ್ ಬಂಡಾಯ ಲೀಗ್ ಆರಂಭಿಸುತ್ತಿದೆ.

Follow Us:
Download App:
  • android
  • ios