Asianet Suvarna News Asianet Suvarna News

ಮಳೆಯಿಂದಾಗಿ KPL ಟೂರ್ನಿಯಲ್ಲಿ ಬದಲಾವಣೆ; ಹೊಸ ವೇಳಾಪಟ್ಟಿ ಪ್ರಕಟ!

ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ ಹಾಗೂ ಪ್ರವಾಹ ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಗೂ ತಟ್ಟಿದೆ. ಇದೀಗ ಕೆಪಿಎಲ್ ಟೂರ್ನಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ನೂತನ ವೇಳಾಪಟ್ಟಿ ಪ್ರಕಾರ ಹುಬ್ಬಳ್ಳಿ ಪಂದ್ಯಗಳನ್ನು ಶಿಫ್ಟ್ ಮಾಡಲಾಗಿದೆ. ರಾಜ್ಯ ಕ್ರಿಕೆಟ್ ಸಂಸ್ಥೆ ನೂತನ ವೇಳಾಪಟ್ಟಿ ಪ್ರಕಟಿಸಿದೆ. 

Karnataka cricket announces revised KPL schedule after heavy rain and flood
Author
Bengaluru, First Published Aug 12, 2019, 2:45 PM IST

ಬೆಂಗಳೂರು(ಆ.12): ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಕರ್ನಾಟದಲ್ಲಿನ ಭೀಕರ ಮಳೆ ಹಾಗೂ ಪ್ರವಾಹದಿಂದ ಅನಿವಾರ್ಯವಾಗಿ ರಾಜ್ಯ ಕ್ರಿಕೆಟ್ ಸಂಸ್ಥೆ ಕೆಪಿಎಲ್ ಟೂರ್ನಿಯ ಕ್ರೀಡಾಂಗಣಗಳನ್ನು ಬದಲಾಯಿಸಿದೆ. ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಿಂದ ಕ್ರೀಡಾಂಗಣ ನೀರಿನಿಂದ ತುಂಬಿ  ಹೋಗಿದೆ ಹೀಗಾಗಿ ಹುಬ್ಳಳ್ಳಿ ಪಂದ್ಯಗಳನ್ನು ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಪ್ರವಾಹ ಸಂತ್ರಸ್ತರ ನೆರವಿಗೆ KPL ಕ್ರಿಕೆಟ್!

ಹುಬ್ಬಳ್ಳಿ ಪಂದ್ಯಗಳು, ಬೆಂಗಳೂರು ಹಾಗೂ ಮೈಸೂರಿಗೆ ಶಿಫ್ಟ್ ಮಾಡಲಾಗಿದೆ. ನೂತನ ವೇಳಾಪಟ್ಟಿ ಪ್ರಕಾರ ಕೆಪಿಎಲ್ ಟೂರ್ನಿಯ ಮೊದಲ ಚರಣ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ. ಆಗಸ್ಟ್ 16 ರಿಂದ 23ರ ವರೆಗೆ ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ಇನ್ನುಳಿದ ಪಂದ್ಯಗಳು ಆಗಸ್ಟ್ 25 ರಿಂದ 31ರ ವರೆಗೆ ಮೈಸೂರಿನಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: KPL 2019: ಇಲ್ಲಿದೆ ಆಟಗಾರರ ಹರಾಜಿನ ಸಂಪೂರ್ಣ ಲಿಸ್ಟ್ !

ಬೆಂಗಳೂರಿನಲ್ಲಿ 15 ಕೆಪಿಎಲ್ ಪಂದ್ಯಗಳನ್ನು ಆಯೋಜಿಸಿದರೆ, ಮೈಸೂರು 10 ಪಂದ್ಯಕ್ಕೆ ಆತಿಥ್ಯವಹಿಸಲಿದೆ. 8ನೇ ಆವೃತ್ತಿ ಕೆಪಿಎಲ್ ಟೂರ್ನಿಗೆ ಎಲ್ಲಾ ತಯಾರಿ ಮಾಡಿಕೊಂಡಿರುವ KSCA, ಇದೀಗ ಟ್ರೋಫಿ ಅನಾವರಣಕ್ಕೆ ಸಜ್ಜಾಗಿದೆ.

KPL ಟೂರ್ನಿ ಸಂಪೂರ್ಣ ವೇಳಾಪಟ್ಟಿ:

Karnataka cricket announces revised KPL schedule after heavy rain and flood
 

Follow Us:
Download App:
  • android
  • ios