ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳು ಮಾರ್ಚ್ 28ರಿಂದ ಮೇ 04ರವರೆಗೆ ಲೀಗ್ ಹಂತದಲ್ಲಿ ಒಟ್ಟು 7 ಪಂದ್ಯಗಳು ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದ್ದು, ಭಾರತೀಯ ಯೋಧರನ್ನು ಪಂದ್ಯ ವೀಕ್ಷಿಸಲು ಕೆಎಸ್’ಸಿಎ ಆಹ್ವಾನಿಸಿದೆ.
ಬೆಂಗಳೂರು(ಮಾ.28): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ತನ್ನ ಪ್ರಾಯೋಜಕರಾದ ಭಾರತಿ ಸಿಮೆಂಟ್ಸ್ ಸಹಯೋಗದೊಂದಿಗೆ ತವರಿನಲ್ಲಿ ಆಡುವ ಪ್ರತಿ ಪಂದ್ಯಕ್ಕೆ ತಲಾ 60 ಯೋಧರನ್ನು ಆಹ್ವಾನಿಸಲು ನಿರ್ಧರಿಸಿದೆ.
IPL 2019:ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟೈಂ ಟೇಬಲ್!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಎಲ್ಲಾ 7 ಪಂದ್ಯಗಳಿಗೂ ಸೈನಿಕರಿಗೆ ಆಹ್ವಾನ ನೀಡಲಾಗುವುದು ಎಂದು ಕೆಎಸ್ಸಿಎ ಪ್ರಕಟಣೆ ತಿಳಿಸಿದೆ. ಮಾರ್ಚ್ 28ರಿಂದ ಮೇ 04ರವರೆಗೆ ಲೀಗ್ ಹಂತದಲ್ಲಿ ಒಟ್ಟು 7 ಪಂದ್ಯಗಳು ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ.
ಐಪಿಎಲ್: RCB ಬೆಂಗಳೂರು ಪಂದ್ಯಕ್ಕೆ ಮೆಟ್ರೋದಿಂದ ಶುಭಸುದ್ದಿ..!
ರಾಯಲ್ ಚಾಲೆಂಜರ್ಸ್ ಬೆಂಗಳೂರು 20, ಕೆಎಸ್’ಸಿಎ 20 ಹಾಗೂ ಭಾರತಿ ಸಿಮೆಂಟ್ ತಲಾ 20 ಟಿಕೆಟ್’ಗಳನ್ನು ಯೋಧರಿಗೆ ನೀಡಲಿದೆ. ಈ ಮೊದಲು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸೂಚಕವಾಗಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದು ಮಾಡಿ ಬಿಸಿಸಿಐ 20 ಕೋಟಿ ರುಪಾಯಿಯನ್ನು ಸೇನಾ ಕಲ್ಯಾಣ ನಿಧಿಗೆ ಅರ್ಪಿಸಿತ್ತು. ಆ ಬಳಿಕ ಚೆನ್ನೈ ಸೂಪರ್’ಕಿಂಗ್ಸ್ ತಂಡವು ಉದ್ಘಾಟನಾ ಪಂದ್ಯದ ಸಂಭಾವನೆಯನ್ನು ಯೋಧರ ನಿಧಿಗೆ ನೀಡಿದ್ದರು.
ಮಾರ್ಚ್ 28ರಿಂದ ತವರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದ್ದು, ಜಯದ ಖಾತೆ ತೆರೆಯುವ ಉತ್ಸಾದಲ್ಲಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 28, 2019, 11:39 AM IST