ತಡವಾಗಿ ಬಂದ ಟೇಬಲ್ ಟೆನಿಸ್ ಆಟಗಾರ್ತಿಯರನ್ನು ಬಿಟ್ಟೇ ಹೊರಟ ಏರ್ ಇಂಡಿಯಾ..!
ಈ ವಿಚಾರವನ್ನು ಕಾಮನ್’ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮನಿಕಾ ಬಾತ್ರ ಟ್ವಿಟರ್’ನಲ್ಲಿ ಹಂಚಿಕೊಂಡಿದ್ದು, ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಹಾಗೂ ಪ್ರಧಾನ ಮಂತ್ರಿ ಸಚಿವಾಲಯದ ಬಳಿ ಮನವಿ ಮಾಡಿಕೊಂಡಿದ್ದರು.
ನವದೆಹಲಿ[ಜು.23]: ಇಂದಿನಿಂದ ಮೆಲ್ಬರ್ನ್ನಲ್ಲಿ ಆರಂಭವಾಗಲಿರುವ ಐಟಿಟಿಎಫ್ ವಿಶ್ವ ಟೂರ್ ಆಸ್ಟ್ರೇಲಿಯನ್ ಓಪನ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿದ್ದ ಭಾರತದ 7 ಟಿಟಿ ಸ್ಪರ್ಧಿಗಳು ವಿಮಾನ ನಿಲ್ದಾಣದಲ್ಲಿಯೇ ಕಾಲ ಕಳೆಯಬೇಕಾದ ಪರಿಸ್ಥಿತಿ ಬಂದಿದೆ.
ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿಗದಿತ ವೇಳೆಗಿಂತ ತಡವಾಗಿ ಬಂದಿದ್ದರಿಂದ ಭಾರತದ ತಾರಾ ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಬಾತ್ರ ಜತೆಗೆ 6 ಟಿಟಿ ಸ್ಪರ್ಧಿಗಳನ್ನು ಏರ್ ಇಂಡಿಯಾ ವಿಮಾನ, ನಿಲ್ದಾಣದಲ್ಲಿಯೇ ಬಿಟ್ಟು ಹೋಗಿದೆ.
ಈ ವಿಚಾರವನ್ನು ಕಾಮನ್’ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮನಿಕಾ ಬಾತ್ರ ಟ್ವಿಟರ್’ನಲ್ಲಿ ಹಂಚಿಕೊಂಡಿದ್ದು, ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಹಾಗೂ ಪ್ರಧಾನ ಮಂತ್ರಿ ಸಚಿವಾಲಯದ ಬಳಿ ಮನವಿ ಮಾಡಿಕೊಂಡಿದ್ದರು.
I would like to thank @NeelamKapur mam for the prompt action and getting our tickets booked for tonight. Finally got my boarding pass and flying soon. Thanks @Media_SAI @Ra_THORe sir @PMOIndia sir pic.twitter.com/ciZPt07fAB
— Manika Batra (@manikabatra_TT) July 22, 2018
ಮನಿಕಾ ಬಾತ್ರ ಟ್ವೀಟ್’ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕ್ರೀಡಾ ಮಹಾ ನಿರ್ದೇಶಕ ನೀಲಂ ಕಪೂರ್, ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ರೀಟ್ವೀಟ್ ಮಾಡಿದ್ದಾರೆ.
Will look into this immediately @Media_SAI @manikabatra_TT https://t.co/3bjQdvg0Ht
— Neelam Kapur (@NeelamKapur) July 22, 2018