2008ರ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಹರ್ಭಜನ್ ಸಿಂಗ್ ಹಾಗೂ ಆ್ಯಂಡ್ರೋ ಸೈಮಂಡ್ಸ್ ನಡುವಿನ ಮಂಕಿ ಜಗಳ ಇದೀಗ ಮತ್ತೆ ಸದ್ದು ಮಾಡುತ್ತಿದೆ. ಸೈಮಂಡ್ಸ್ ಹೇಳಿಕೆಗೆ ಹರ್ಭಜನ್ ಸಿಂಗ್ ಗರಂ ಆಗಿದ್ದೇಕೆ? ಇಲ್ಲಿದೆ ವಿವರ.

ಮುಂಬೈ(ಡಿ.16): ಕ್ರಿಕೆಟ್ ಇತಿಹಾಸದಲ್ಲಿ ಕೆಟ್ಟ ಘಟನೆಯಾಗಿ ಪರಿಣಮಿಸಿರುವ ಮಂಕಿ ಗೇಟ್ ಪ್ರಕರಣ ಮತ್ತೆ ಚರ್ಚೆಗೆ ಒಳಗಾಗಿದೆ. 2008ರಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಹರ್ಭಜನ್ ಸಿಂಗ್ ಹಾಗೂ ಆಸ್ಟ್ರೇಲಿಯಾ ಕ್ರಿಕೆಟಿಗ ಆ್ಯಂಡ್ರೋ ಸೈಮಂಡ್ಸ್ ನಡುವಿನ ಪ್ರಕರಣ 10 ವರ್ಷಗಳ ಬಳಿಕ ಮತ್ತೆ ಸದ್ದು ಮಾಡುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ:ಐಪಿಎಲ್ 2019: ಧೋನಿ ನಾಯಕತ್ವದ ಸಿಎಸ್‌ಕೆ ತಂಡ ಹೀಗಿದೆ!

ಇತ್ತೀಚೆಗಿನ ಸಂದರ್ಶನದಲ್ಲಿ ಆ್ಯಂಡ್ರೂ ಸೈಮಂಡ್ಸ್ ಅಚ್ಚರಿ ಹೇಳಿಕೆ ನೀಡಿದ್ದರು. ಮಂಕಿ ಗೇಟ್ ಪ್ರಕರಣದ ಬಳಿಕ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಒಂದೇ ತಂಡದಲ್ಲಿ ಹರ್ಭಜನ್ ಹಾಗೂ ಸೈಮಂಡ್ಸ್ ಆಡಿದ್ದರು. ಈ ವೇಳೆ ಹರ್ಭಜನ್ ಮಂಕಿ ಗೇಟ್ ಪ್ರಕರಣಕ್ಕೆ ಕ್ಷಮೆ ಕೇಳಿದ್ದರು. ನನ್ನ ಭುಜದಲ್ಲಿ ತಲೆ ಇಟ್ಟು ಅತ್ತಿದ್ದರು ಎಂದು ಸೈಮಂಡ್ಸ್ ಹೇಳಿದ್ದರು.

ಇದನ್ನೂ ಓದಿ: BWF ವಿಶ್ವ ಟೂರ್ ಬ್ಯಾಡ್ಮಿಂಟನ್: ಇತಿಹಾಸ ಬರೆದ ಪಿವಿ ಸಿಂಧು!

ಸೈಮಂಡ್ಸ್ ಈ ಹೇಳಿಕೆಗೆ ಹರ್ಭಜನ್ ತಿರುಗೇಟು ನೀಡಿದ್ದಾರೆ. ಸೈಮಂಡ್ಸ್ ಅತ್ಯುತ್ತಮ ಕ್ರಿಕೆಟಿಗೆ ಎಂದು ನಾನು ಅಂದುಕೊಂಡಿದ್ದೆ. ಆದರೆ ಸೈಮಂಡ್ಸ್ ಇದೀಗ ಉತ್ತಮ ಕಾದಂಬರಿ ಬರಹಗಾರನಾಗಿ ಬದಲಾಗಿದ್ದಾರೆ. 2008ರಲ್ಲಿ ಮಾರಾಟ ಮಾಡಿದ್ದ ಕತೆಯನ್ನ ಇದೀಗ 2018ರಲ್ಲೂ ಮಾರಾಟ ಮಾಡುತ್ತಿದ್ದಾರೆ ಎಂದು ಹರ್ಭಜನ್ ಟ್ವಿಟರ್ ಮೂಲಕ ತಿರುಗೇಟು ನೀಡಿದ್ದಾರೆ.

Scroll to load tweet…

2008 ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಹರ್ಭಜನ್ ಸಿಂಗ್ ಜನಾಂಗೀಯ ನಿಂದನೆ ಆರೋಪಕ್ಕೆ ತುತ್ತಾದರು. ಸೈಮಂಡ್ಸ್‌ರನ್ನ ಮಂಕಿ ಎಂದು ಕರೆದಿದ್ದಾರೆ ಎಂದು 3 ಪಂದ್ಯದಿಂದ ಅಮಾನತು ಮಾಡಲಾಗಿತ್ತು. ಆದರೆ ವಿಚಾರಣೆಯಲ್ಲಿ ಹರ್ಭಜನ್ ಮೇಲಿನ ಆರೋಪ ಸಾಬೀತಾಗಿಲ್ಲ. ಆದರೆ ಈ ಪ್ರಕರಣ ಮತ್ತೆ ಮತ್ತೆ ಸದ್ದು ಮಾಡುತ್ತಲೇ ಇದೆ.