Asianet Suvarna News Asianet Suvarna News

ದ. ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಯ್ಕೆ ಸಮಿತಿಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡುವ ಸಂದರ್ಭದಲ್ಲಿ ಮುಖ್ಯ ಆಯ್ಕೆದಾರ ಪ್ರಸಾದ್ ಬಳಿ ಮೂರು ಅತ್ಯಂತ ಪ್ರಮುಖ ಮಾತುಗಳನ್ನು ಆಡಿದ್ದರು 'ಓಕೆ ದಟ್ಸ್ ಇಟ್'. ಇನ್ಮುಂದೆ ನಾನು ವಿರಾಟ್ ಕೊಹ್ಲಿಯ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದರು. ಇದೀಗ ತಾನು ಕೊಟ್ಟ ಭಾಷೆಯಂತೆ ಕೊಹ್ಲಿಗೆ ಪ್ರತಿಯೊಂದು ಕ್ಷಣದಲ್ಲೂ ಸಾಥ್ ನೀಡುತ್ತಿದ್ದಾರೆ. ಟೀಂಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದಾರೆ. ಸಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಇವರು ಮತ್ತೊಮ್ಮೆ ತಾನು ಕೊಟ್ಟ ಭಾಷೆಯಂತೆ ನಡೆದುಕೊಂಡಿದ್ದಾರೆ. ಧೋನಿಯ ಅದ್ಭುತ ಸಲಹೆಯಿಂದಲೇ ಅದ್ಭುತ ಆರಂಭಿಕ ಆಟವಾಡಿದ ದಕ್ಷಿಣ ಆಫ್ರಿಕಾ ತಂಡ ಕೇವಲ 192 ರನ್' ಗಳಿಸಿ ಸೋಲನುಭವಿಸಿತು.

ms dhoni once again keeps his promise against south africa

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡುವ ಸಂದರ್ಭದಲ್ಲಿ ಮುಖ್ಯ ಆಯ್ಕೆದಾರ ಪ್ರಸಾದ್ ಬಳಿ ಮೂರು ಅತ್ಯಂತ ಪ್ರಮುಖ ಮಾತುಗಳನ್ನು ಆಡಿದ್ದರು 'ಓಕೆ ದಟ್ಸ್ ಇಟ್'. ಇನ್ಮುಂದೆ ನಾನು ವಿರಾಟ್ ಕೊಹ್ಲಿಯ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದರು. ಇದೀಗ ತಾನು ಕೊಟ್ಟ ಭಾಷೆಯಂತೆ ಕೊಹ್ಲಿಗೆ ಪ್ರತಿಯೊಂದು ಕ್ಷಣದಲ್ಲೂ ಸಾಥ್ ನೀಡುತ್ತಿದ್ದಾರೆ. ಟೀಂಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದಾರೆ. ಸಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಇವರು ಮತ್ತೊಮ್ಮೆ ತಾನು ಕೊಟ್ಟ ಭಾಷೆಯಂತೆ ನಡೆದುಕೊಂಡಿದ್ದಾರೆ. ಧೋನಿಯ ಅದ್ಭುತ ಸಲಹೆಯಿಂದಲೇ ಅದ್ಭುತ ಆರಂಭಿಕ ಆಟವಾಡಿದ ದಕ್ಷಿಣ ಆಫ್ರಿಕಾ ತಂಡ ಕೇವಲ 192 ರನ್' ಗಳಿಸಿ ಸೋಲನುಭವಿಸಿತು.

ವಾಸ್ತವವಾಗಿ ನಡೆದಿದ್ದೇನೆ?

ಮೊದಲ ಇನ್ನಿಂಗ್ಸ್'ನಲ್ಲಿ ಆಡಿದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಮಾಡುತ್ತಿದ್ದಾಗ, ಪಂದ್ಯದ 43ನೇ ಓವರ್'ನಲ್ಲಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾನಿಗೆ ಬೌಲಿಂಗ್ ಮಾಡುವ ಅವಕಾಶ ನೀಡಿದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಧೋನಿಯೊಂದಿಗೆ ಸ್ಲಿಪ್'ನಲ್ಲಿದ್ದರು. ಈ ವೇಳೆ ಧೋನಿ ಬುಮ್ರಾ ಬದಲಾಗಿ ಭುವಿಗೆ ಬೌಲಿಂಗ್ ಮಾಡುವ ಅವಕಾಶ ನೀಡುವಂತೆ ಅಲಹೆ ನೀಡಿದ್ದಾರೆ. ಧೋನಿಯ ಮಾತಿಗೆ ಯಾವುದೇ ವಿರೋಧ ವ್ಯಕ್ತಪಡಿಸದ ವಿರಾಟ್ ಬುಮ್ರಾ ಬದಲಾಗಿ ಭುವಿಗೆ ಬೌಲಿಂಗ್ ಮಾಡುವ ಅವಕಾಶ ನೀಡಿದ್ದಾರೆ. ಈ ಓವರ್'ನಲ್ಲಿ ಬೌಲಿಂಗ್ ಮಾಡಿದ ಭುವನೇಶ್ವರ್ ಆ ಓವರ್'ನಲ್ಲಿ ಒಂದಾದ ಬಳಿಕ ಒಂದರಂತೆ ಎರಡು ಬಾಲ್'ಗೆ ದಕ್ಷಿಣ ಆಫ್ರಿಕಾದ ಎರಡು ಪ್ರಮುಖ ವಿಕೆಟ್ ಬೀಳಿಸಿದ್ದಾರೆ. ಇದರಿಂದಾಗಿ ಸೌತ್ ಆಫ್ರಿಕಾ ತಂಡ 9 ವಿಕೆಟ್'ನಷ್ಟಕ್ಕೆ ಕೇವಲ 189 ಸ್ಕೋರ್ ಗಳಿಸಿದ್ದಾರೆ. ಇನ್ನು ಗಮನಿಸಬೇಕಾದ ವಿಚಾರವೆಂದರೆ ದ. ಆಫ್ರಿಕಾ ಈ ಓವರ್'ನಲ್ಲಿ ಗಳಿಸಿದ್ದು ಕೇವಲ 5 ರನ್.

ಪಂದ್ಯದಲ್ಲಿ ಜಯ ಗಳಿಸಿದ ಬಳಿಕ ಮಾತನಾಡಿದ ವಿರಾಟ್ 'ಇಡೀ ಟೂರ್ನಮೆಂಟ್'ನಲ್ಲಿ ಟೀಂ ಇಂಡಿಯಾಗೆ ಇದು ಅತ್ಯಂತ ಮಹತ್ವದ ಪಂದ್ಯವಾಗಿತ್ತು. ಈ ಪಂದ್ಯದ ಪ್ರತಿ ಕ್ಷಣದಲ್ಲೂ ಟೀಂ ಇಂಡಿಯಾ ವಿರೋಧಿ ಟೀಂಗೆ ಕಠಿಣ ಸವಾಲು ನೀಡಿದೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಹೀಗೆ ಪ್ರತಿಯೊಂದೂ ಕ್ಷೇತ್ರದಲ್ಲೂ ನಾವು ಅವರಿಗಿಂತ ಒಂದು ಹೆಜ್ಜೆ ಬಲಿಷ್ಟವಾಗಿದ್ದೆವು. ಇನ್ನು ಮಾಜಿ ನಾಯಕ ಧೋನಿಯ ಅನುಭವದ ಜಾದೂ ಮತ್ತೊಂದು ಬಾರಿ ನೋಡಲು ಸಿಕ್ಕಿದೆ ಎಂದಿದ್ದಾರೆ.

 

Latest Videos
Follow Us:
Download App:
  • android
  • ios