ಇದೀಗ ಚಾಂಪಿಯನ್ಸ್ ಟ್ರೋಫಿ ವೇಳೆ ತಂಡದ ಕುರಿತು ಮಲ್ಹೋತ್ರ ವರದಿ ಸಲ್ಲಿಸಿದ್ದು, ಕುಂಬ್ಳೆ ಹಾಗೂ ಕೊಹ್ಲಿ ನಡುವೆ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ ಎಂದು ಉಲ್ಲೇಖಿಸಿದ್ದಾರೆ.

ನವದೆಹಲಿ(ಜು.03): ಚಾಂಪಿಯನ್ಸ್ ಟ್ರೋಫಿ ವೇಳೆ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ಕೋಚ್ ಅನಿಲ್ ಕುಂಬ್ಳೆ ನಡುವೆ ಯಾವುದೇ ಭಿನ್ನಾಭಿಪ್ರಾಯ ಉಂಟಾಗಿರಲಿಲ್ಲ ಎಂದು ತಂಡದ ಮ್ಯಾನೇಜರ್ ಕಪಿಲ್ ಮಲ್ಹೋತ್ರಾ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತ ತವರಿನ್ನಲ್ಲಾಗಲೀ ಅಥವಾ ವಿದೇಶದಲ್ಲಾಗಲೀ ಯಾವುದೇ ಸರಣಿಯನಗನಾಡಿದ ಬಳಿಕ ಸಾಮಾನ್ಯವಾಗಿ ಬಿಸಿಸಿಐಗೆ ವರದಿ ನೀಡುತ್ತಾರೆ.

ಇದೀಗ ಚಾಂಪಿಯನ್ಸ್ ಟ್ರೋಫಿ ವೇಳೆ ತಂಡದ ಕುರಿತು ಮಲ್ಹೋತ್ರ ವರದಿ ಸಲ್ಲಿಸಿದ್ದು, ಕುಂಬ್ಳೆ ಹಾಗೂ ಕೊಹ್ಲಿ ನಡುವೆ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಅನಿಲ್ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಂತೆ, ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಎಲ್ಲವೂ ಸರಿಯಿಲ್ಲ ಎಂಬಂತ ವರದಿಗಳು ಹರಿದಾಡುತ್ತಿದ್ದವು. ಈ ಕುರಿತಂತೆ ಕಪಿಲ್ ಮಲ್ಹೋತ್ರ ವರದಿ ಸಲ್ಲಿಸಿದ್ದರು.

ಈ ವರದಿಯಲ್ಲಿ ಕೊಹ್ಲಿ, ಅನಿಲ್ ಕುಂಬ್ಳೆ ಅವರೊಂದಿಗೆ ಕನಿಷ್ಠ ಒರಟಾಗಿಯೂ ನಡೆದುಕೊಂಡಿರಲಿಲ್ಲವೆಂದು ಮಲ್ಹೋತ್ರ ತಿಳಿಸಿದ್ದಾರೆಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಅನಿಲ್ ಕುಂಬ್ಳೆ ದಿಢೀರ್ ರಾಜೀನಾಮೆ ಹಾಗೂ ರಾಜೀನಾಮೆಗೆ ಜಂಬೋ ಕೊಟ್ಟ ಕಾರಣಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಲ್ಹೋತ್ರ ವರದಿಯೂ ವಸ್ತುನಿಷ್ಟವಾಗಿದೆಯೇ ಎನ್ನುವ ಕುರಿತಂತೆ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.