ಈ ಮೂಲಕ ಜಮ್ಮು-ಕಾಶ್ಮೀರದ ವಿವಿಧ ಭಾಗಗಳಲ್ಲಿ ಗಡಿ ನುಸುಳುವ ಪ್ರಕರಣಗಳಲ್ಲಿ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಹತ್ಯೆಗೀಡಾದ ಉಗ್ರರ ಸಂಖ್ಯೆ 14ಕ್ಕೇರಿದೆ.

ಶ್ರೀನಗರ(ಜೂ.10): ಭಾರತದ ಗಡಿ ನುಸುಳಲು ಯತ್ನಿಸಿದ ಮತ್ತೋರ್ವ ಉಗ್ರನನ್ನು ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ.

Add Asianetnews Kannada as a Preferred SourcegooglePreferred

ಭಾರತದೊಳಕ್ಕೆ ಅಕ್ರಮವಾಗಿ ನುಸುಳಲು ಮುಂದಾಗಿದ್ದ ಐವರು ಉಗ್ರರನ್ನು ನಿನ್ನೆಯಷ್ಟೇ ಭಾರತದ ಸೇನೆ ಸದೆಬಡಿದಿತ್ತು. ಇಂದೂ ಸಹ ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ನುಸುಳಲು ಯತ್ನಿಸಿದ ಉಗ್ರನನ್ನು ಸೇನೆ ಹತ್ಯೆ ಮಾಡಿದೆ.

ಈ ಮೂಲಕ ಜಮ್ಮು-ಕಾಶ್ಮೀರದ ವಿವಿಧ ಭಾಗಗಳಲ್ಲಿ ಗಡಿ ನುಸುಳುವ ಪ್ರಕರಣಗಳಲ್ಲಿ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಹತ್ಯೆಗೀಡಾದ ಉಗ್ರರ ಸಂಖ್ಯೆ 14ಕ್ಕೇರಿದೆ. ಈ ಕಾರ್ಯಾಚರಣೆಗಳಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.

ಕದನವಿರಾಮ ಉಲ್ಲಂಘನೆ:

ಈ ನಡುವೆ, ಪಾಕಿಸ್ತಾನವು ಇಂದೂ ರಾತ್ರಿ ಪೂಂಛ್‌'ನಲ್ಲಿ ಕದನವಿರಾಮ ಉಲ್ಲಂಘಿಸಿ ದಾಳಿ ನಡೆಸಿದೆ. ಭಾರತೀಯ ಪಡೆಗಳೂ ದಿಟ್ಟ ಉತ್ತರ ನೀಡಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ.