ಲೀಗ್‌ ಹಂತದ ಪಂದ್ಯಗಳ ಮುಕ್ತಾಯಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದ ಪುಣೇರಿ ಮತ್ತು 2ನೇ ಸ್ಥಾನ ಪಡೆದುಕೊಂಡಿದ್ದ ಹಾಲಿ ಚಾಂಪಿಯನ್‌ ಜೈಪುರ ತಂಡಗಳು ನೇರವಾಗಿ ಸೆಮಿಫೈನಲ್‌ ಪ್ರವೇಶಿಸಿದ್ದವು. ಮತ್ತೊಂದೆಡೆ ಪಾಟ್ನಾ ಪೈರೇಟ್ಸ್‌ ಹಾಗೂ ಹರ್ಯಾಣ ಸ್ಟೀಲರ್ಸ್‌ ತಂಡಗಳು ಎಲಿಮಿನೇಟರ್‌ನಲ್ಲಿ ಗೆದ್ದು ಅಂತಿಮ 4ರ ಘಟ್ಟಕ್ಕೆ ಕಾಲಿಟ್ಟಿವೆ.

ಹೈದರಾಬಾದ್‌(ಫೆ.28): 10ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್‌ನ ಸೆಮಿಫೈನಲ್‌ ಕದನಕ್ಕೆ ವೇದಿಕೆ ಸಜ್ಜುಗೊಂಡಿದೆ. ಬುಧವಾರ 2 ಸೆಮೀಸ್‌ ಪಂದ್ಯಗಳು ನಡೆಯಲಿದ್ದು, ಇಲ್ಲಿನ ಗಚ್ಚಿಬೌಲಿಯ ಒಳಾಂಗಣ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮೊದಲ ಸೆಮಿಫೈನಲ್‌ನಲ್ಲಿ ಪುಣೇರಿ ಪಲ್ಟನ್‌ ಹಾಗೂ ಪಾಟ್ನಾ ಪೈರೇಟ್ಸ್‌ ಮುಖಾಮುಖಿಯಾಗಲಿದೆ. 2ನೇ ಸೆಮಿಫೈನಲ್‌ ಪಂದ್ಯದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ಸ್‌ ಹಾಗೂ ಹರ್ಯಾಣ ಸ್ಟೀಲರ್ಸ್‌ ತಂಡಗಳು ಪರಸ್ಪರ ಸೆಣಸಾಡಲಿವೆ.

Add Asianetnews Kannada as a Preferred SourcegooglePreferred

ಲೀಗ್‌ ಹಂತದ ಪಂದ್ಯಗಳ ಮುಕ್ತಾಯಕ್ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದ ಪುಣೇರಿ ಮತ್ತು 2ನೇ ಸ್ಥಾನ ಪಡೆದುಕೊಂಡಿದ್ದ ಹಾಲಿ ಚಾಂಪಿಯನ್‌ ಜೈಪುರ ತಂಡಗಳು ನೇರವಾಗಿ ಸೆಮಿಫೈನಲ್‌ ಪ್ರವೇಶಿಸಿದ್ದವು. ಮತ್ತೊಂದೆಡೆ ಪಾಟ್ನಾ ಪೈರೇಟ್ಸ್‌ ಹಾಗೂ ಹರ್ಯಾಣ ಸ್ಟೀಲರ್ಸ್‌ ತಂಡಗಳು ಎಲಿಮಿನೇಟರ್‌ನಲ್ಲಿ ಗೆದ್ದು ಅಂತಿಮ 4ರ ಘಟ್ಟಕ್ಕೆ ಕಾಲಿಟ್ಟಿವೆ.

ದಶಕದ ಬಳಿಕ ರಣಜಿ ಟ್ರೋಫಿ ಕನಸಲ್ಲಿದ್ದ ಕರ್ನಾಟಕ ನಾಕೌಟಲ್ಲೇ ಔಟ್‌!

ಸೋಮವಾರ ನಡೆದಿದ್ದ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ ದಬಾಂಗ್‌ ಡೆಲ್ಲಿ ವಿರುದ್ಧ ಪಾಟ್ನಾ 37-35 ಅಂಕಗಳಿಂದ ರೋಚಕ ಗೆಲುವು ಸಾಧಿಸಿತ್ತು. 2ನೇ ಎಲಿಮಿನೇಟರ್‌ ಪಂದ್ಯದಲ್ಲಿ ಹರ್ಯಾಣಕ್ಕೆ ಗುಜರಾತ್‌ ವಿರುದ್ಧ 42-25 ಅಂಕಗಳ ಗೆಲುವು ಲಭಿಸಿತ್ತು.

Scroll to load tweet…

ಪಾಟ್ನಾಗೆ 5ನೇ, ಹರ್‍ಯಾಣಕ್ಕೆ ಚೊಚ್ಚಲ ಫೈನಲ್‌ ತವಕ!

ಸೆಮೀಸ್‌ಗೇರಿರುವ 4 ತಂಡಗಳ ಪೈಕಿ ಪಾಟ್ನಾ ಪ್ರೊ ಕಬಡ್ಡಿಯಲ್ಲಿ ಅತ್ಯಂತ ಯಶಸ್ವಿ ತಂಡ. 3 ಬಾರಿ ಪ್ರಶಸ್ತಿ ಗೆದ್ದಿರುವ ಪಾಟ್ನಾ ಈ ಬಾರಿ 5ನೇ ಫೈನಲ್‌ ತವಕದಲ್ಲಿದೆ. ಹಾಲಿ ಚಾಂಪಿಯನ್ ಜೈಪುರ 4ನೇ ಬಾರಿ ಪ್ರಶಸ್ತಿ ಸುತ್ತಿಗೇರಲು ಕಾಯುತ್ತಿದ್ದರೆ, ಹರ್ಯಾಣ ಚೊಚ್ಚಲ ಫೈನಲ್‌ಗಾಗಿ ತವಕಿಸುತ್ತಿದೆ. ಕಳೆದ ಬಾರಿ ರನ್ನರ್‌-ಅಪ್‌ ಪುಣೇರಿ 2ನೇ ಫೈನಲ್‌ ನಿರೀಕ್ಷೆಯಲ್ಲಿದೆ.

IPL 2024 ಮುಂಬೈ ಇಂಡಿಯನ್ಸ್ ಪರ ಅತಿಹೆಚ್ಚು ಸಂಭಾವನೆ ಪಡೆಯುತ್ತಿರುವ ಆಟಗಾರರಿವರು..!

ಪಂದ್ಯಗಳ ಸಮಯ

ಪುಣೆ-ಪಾಟ್ನಾ, ರಾತ್ರಿ 8 ಗಂಟೆಗೆ

ಜೈಪುರ-ಹರ್ಯಾಣ, ರಾತ್ರಿ 9 ಗಂಟೆಗೆ

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್‌

ಹಾಕಿ ಇಂಡಿಯಾದ ಸಿಇಒ ಎಲೆನಾ ರಾಜೀನಾಮೆ!

ನವದೆಹಲಿ: ಕಳೆದ 13 ವರ್ಷಗಳಿಂದ ಹಾಕಿ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಆಗಿ ಕೆಲಸ ಮಾಡುತ್ತಿದ್ದ ಆಸ್ಟ್ರೇಲಿಯಾದ ಎಲೆನಾ ನಾರ್ಮನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಾಕಿ ಇಂಡಿಯಾದಲ್ಲಿನ ಬಣ ರಾಜಕೀಯ ಹಾಗೂ ವೇತನ ತಡೆಗೆ ಬೇಸತ್ತು ಈ ನಿರ್ಧಾರ ಕೈಗೊಂಡಿರುವುದಾಗಿ ಎಲೆನಾ ಹೇಳಿಕೊಂಡಿದ್ದಾರೆ.

"ಹಾಕಿ ಇಂಡಿಯಾದಲ್ಲಿ ಎರಡು ಬಣಗಳಿವೆ. ಒಂದು ಅಧ್ಯಕ್ಷ ದಿಲೀಪ್ ಟಿರ್ಕೆ ಹಾಗೂ ನಾನು(ಎಲೆನಾ), ಮತ್ತೊಂದು ಬಣದಲ್ಲಿ ಕಾರ್ಯದರ್ಶಿ ಭೋಲನಾಥ್ ಸಿಂಗ್, ಕಾರ್ಯನಿರ್ವಾಹಕ ನಿರ್ದೇಶಕ ಶ್ರೀವಾಸ್ತವ ಹಾಗೂ ಖಜಾಂಚಿ ಶೇಖರ್ ಇದ್ದಾರೆ. ಇವರುಗಳ ನಡುವೆ ಕೆಲಸ ಮಾಡುವುದು ಬಹಳ ಕಷ್ಟ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ನಾನು ಹುದ್ದೆ ತ್ಯಜಿಸಲು ನಿರ್ಧರಿಸಿದೆ" ಎಂದು 49 ವರ್ಷದ ಎಲೆನಾ ಹೇಳಿಕೊಂಡಿದ್ದಾರೆ.