ಪುಲ್ವಾಮದಲ್ಲಿ ನಡೆದ ಭಯೋತ್ವಾದಕ ದಾಳಿಯಿಂದ 40 CRPF ಯೋಧರು ಹುತಾತ್ಮರಾಗಿದ್ದಾರೆ. ಯೋಧರನ್ನು ಕಳೆದುಕೊಂಡ ನೋವಿನಿಂದ RP-SG ಕ್ರೀಡಾಕಾರ್ಯಕ್ರಮವನ್ನ ವಿರಾಟ್ ಕೊಹ್ಲಿ ಮುುಂದೂಡಿದ್ದಾರೆ.
ನವದೆಹಲಿ(ಫೆ.16): ಪುಲ್ವಾಮದಲ್ಲಿ CRPF ಯೋಧರ ಮೇಲಿನ ಭಯೋತ್ವಾದಕ ದಾಳಿಯಿಂದ ಭಾರತದಲ್ಲಿ ಸೂತಕದ ಛಾಯೆ ಆವರಿಸಿದೆ. ಜೈಶ್-ಇ-ಮೊಹಮ್ಮದ ಭಯೋತ್ವಾದಕ ಸಂಘಟನೆಯ ದಾಳಿಯಿಂದ 40 CRPFಯೋಧರು ಹುತಾತ್ಮರಾಗಿದ್ದಾರೆ. ಘಟನೆಯನ್ನ ಖಂಡಿಸಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದರು. ಇಷ್ಟೇ ಅಲ್ಲ RP-SG ಕ್ರೀಡಾಕಾರ್ಯಕ್ರಮವನ್ನೂ ಮುಂದೂಡಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಬಲಿಷ್ಠ ಟೀಂ ಇಂಡಿಯಾ ಪ್ರಕಟ!
ಫೆ.15 ರಂದು RP-SG ಭಾರತೀಯ ಕ್ರೀಡಾ ಗೌರವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಹುತಾತ್ಮ CRPF ಯೋಧರಿಗಾಗಿ RP-SG ಕ್ರೀಡಾಕಾರ್ಯಕ್ರಮವನ್ನು ಫೆ.16ಕ್ಕೆ ಮುಂದೂಡಲಾಗಿದೆ. ಈ ಕುರಿತು ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಯೋಧರನ್ನು ಕಳೆದುಕೊಂಡ ನೋವಿನಿಂದ ಕಾರ್ಯಕ್ರಮ ಮುಂದೂಡುವುದಾಗಿ ಕೊಹ್ಲಿ ಹೇಳಿದ್ದಾರೆ.
The RP-SG Indian Sports Honours has been postponed. At this heavy moment of loss that we all find ourselves in, we would like to cancel this event that was scheduled to take place tomorrow.
— Virat Kohli (@imVkohli) February 15, 2019
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ ದಾಳಿ: ಉಗ್ರರ ಕೃತ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರ ಆಕ್ರೋಶ!
ಪುಲ್ವಾಮದಲ್ಲಿ ನಡೆದ ಭಯೋತ್ವಾದ ದಾಳಿಯಿಂದ 40 CRPF ಜವಾನರ ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಾಟಕ CRPF ಯೋಧ ಗುರು ಕೂಡ ಹುತಾತ್ಮರಾಗಿದ್ದಾರೆ. ಇಂದು(ಫೆ.16) ಗುರು ಪಾರ್ಥಿವ ಶರೀರ ಸ್ವಗ್ರಾಮ ಮಂಡ್ಯಗೆ ಆಗಮಿಸಲಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 16, 2019, 9:20 AM IST