‘ಎ’ ಗುಂಪಿನಲ್ಲಿರುವ ಕರ್ನಾಟಕ, ನ.12ರಿಂದ ವಿದರ್ಭ ವಿರುದ್ಧ ನಾಗ್ಪುರದಲ್ಲಿ ನಡೆಯಲಿರುವ ಪಂದ್ಯದೊಂದಿಗೆ ಈ ಋುತುವಿನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಸೋಮವಾರ ಕೆಎಸ್‌ಸಿಎ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿತು. 

ಬೆಂಗಳೂರು(ನ.06): ವಿಜಯ್‌ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ ಕಳಪೆ ಪ್ರದರ್ಶನ ನೀಡಿದ್ದಕ್ಕಾಗಿ ನಾಯಕತ್ವ ಕಳೆದುಕೊಂಡಿದ್ದ ವಿನಯ್‌ ಕುಮಾರ್‌ರನ್ನು, ರಣಜಿ ಟ್ರೋಫಿಯ ಮೊದಲ ಪಂದ್ಯಕ್ಕೆ ರಾಜ್ಯ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಎ’ ಗುಂಪಿನಲ್ಲಿರುವ ಕರ್ನಾಟಕ, ನ.12ರಿಂದ ವಿದರ್ಭ ವಿರುದ್ಧ ನಾಗ್ಪುರದಲ್ಲಿ ನಡೆಯಲಿರುವ ಪಂದ್ಯದೊಂದಿಗೆ ಈ ಋುತುವಿನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಸೋಮವಾರ ಕೆಎಸ್‌ಸಿಎ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿತು. 

Scroll to load tweet…

ಭಾರತ ‘ಎ’ ತಂಡದಲ್ಲಿರುವ ಮಯಾಂಕ್‌ ಅಗರ್‌ವಾಲ್‌, ಕೆ.ಗೌತಮ್‌, ಭಾರತ ತಂಡದಲ್ಲಿರುವ ಮನೀಶ್‌ ಪಾಂಡೆ ಸೇವೆ ಅಲಭ್ಯವಾಗಲಿದೆ.

ತಂಡದ ವಿವರ: ವಿನಯ್‌ ಕುಮಾರ್‌ (ನಾಯಕ), ಕರುಣ್‌ ನಾಯರ್‌, ಆರ್‌.ಸಮರ್ಥ್, ಡಿ.ನಿಶ್ಚಲ್‌, ಪವನ್‌ ದೇಶಪಾಂಡೆ, ಸಿದ್ಧಾರ್ಥ್, ಕೆ.ವಿ, ಸ್ಟುವರ್ಟ್‌ ಬಿನ್ನಿ, ಶ್ರೇಯಸ್‌ ಗೋಪಾಲ್‌, ಅಭಿಮನ್ಯು ಮಿಥುನ್‌, ಪ್ರಸಿದ್ಧ್ ಕೃಷ್ಣ, ಜೆ. ಸುಚಿತ್‌, ರೋನಿತ್‌ ಮೋರೆ, ಶಿಶಿರ್‌ ಭವಾನೆ, ಶರತ್‌ ಬಿ.ಆರ್‌, ಶರತ್‌ ಶ್ರೀನಿವಾಸ್‌.