Asianet Suvarna News Asianet Suvarna News

ರಣಜಿ ಟ್ರೋಫಿ: ಕರ್ನಾಟಕಕ್ಕೆ ಮೊದಲ ಇನ್ನಿಂಗ್ಸ್ ಮುನ್ನಡೆ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಕರ್ನಾಟಕ ಶ್ರೇಯಸ್ ಗೋಪಾಲ್, ಮನೀಶ್ ಪಾಂಡೆ ಹಾಗೂ ಶ್ರೀನಿವಾಸ್ ಶರತ್ ಅರ್ಧಶತಕಗಳ ನೆರವಿನಿಂದ 275 ರನ್ ಬಾರಿಸಿ ಆಲೌಟ್ ಆಗಿತ್ತು. ಆ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಸೌರಾಷ್ಟ್ರ ಎರಡನೇ ದಿನದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 227 ರನ್ ಬಾರಿಸಿತ್ತು.

Ranji Trophy Karnataka take 39 runs lead in First Innings
Author
Bengaluru, First Published Jan 26, 2019, 10:43 AM IST

ಬೆಂಗಳೂರು[ಜ.26]: ರೋನಿತ್ ಮೋರೆ, ಅಭಿಮನ್ಯು ಮಿಥುನ್ ಮಾರಕ ದಾಳಿಗೆ ತತ್ತರಿಸಿದ ಸೌರಾಷ್ಟ್ರ ಮೊದಲ ಇನ್ನಿಂಗ್ಸ್’ನಲ್ಲಿ ಕೇವಲ 236 ರನ್’ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಕರ್ನಾಟಕ 39 ರನ್’ಗಳ ಅಲ್ಪ ಮುನ್ನಡೆ ಪಡೆದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಕರ್ನಾಟಕ ಶ್ರೇಯಸ್ ಗೋಪಾಲ್, ಮನೀಶ್ ಪಾಂಡೆ ಹಾಗೂ ಶ್ರೀನಿವಾಸ್ ಶರತ್ ಅರ್ಧಶತಕಗಳ ನೆರವಿನಿಂದ 275 ರನ್ ಬಾರಿಸಿ ಆಲೌಟ್ ಆಗಿತ್ತು. ಆ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಸೌರಾಷ್ಟ್ರ ಎರಡನೇ ದಿನದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 227 ರನ್ ಬಾರಿಸಿತ್ತು. ಮೊದಲ ದಿನವೇ ರೋನಿತ್ ಮೋರೆ 5 ವಿಕೆಟ್ ಪಡೆದು ಮಿಂಚಿದ್ದರು. ಮೂರನೇ ದಿನದ ಆರಂಭದಲ್ಲೇ ಮಿಥುನ್ ಸತತ ಎರಡು ಎಸೆತಗಳಲ್ಲಿ 2 ವಿಕೆಟ್ ಪಡೆದು ಕರ್ನಾಟಕ ಮೇಲುಗೈ ಸಾಧಿಸಲು ನೆರವಾದರು. ಸೌರಾಷ್ಟ್ರ ಕೊನೆಯ 49 ಎಸೆತಗಳಲ್ಲಿ ಕೇವಲ 13 ರನ್ ಗಳಿಸಿ 6 ವಿಕೆಟ್ ಕಳೆದುಕೊಂಡಿತು.

ಕರ್ನಾಟಕ ಪರ ರೋನಿತ್ ಮೋರೆ 6 ವಿಕೆಟ್ ಕಬಳಿಸಿದರೆ, ಮಿಥುನ್ 3 ಹಾಗೂ ಶ್ರೇಯಸ್ ಗೋಪಾಲ್ 1 ವಿಕೆಟ್ ಪಡೆದರು. ಇನ್ನು ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ಆರ್ ಸಮರ್ಥ್ ವಿಕೆಟ್ ಕಳೆದುಕೊಂಡಿದೆ. ಇದೀಗ ಮಯಾಂಕ್ ಅಗರ್’ವಾಲ್ ಹಾಗೂ ಕೆ. ಸಿದ್ಧಾರ್ಥ್ ಬ್ಯಾಟಿಂಗ್ ನಡೆಸುತ್ತಿದ್ದು 6 ಓವರ್ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 14 ರನ್ ಬಾರಿಸಿದ್ದು ಒಟ್ಟಾರೆ 54 ರನ್’ಗಳ ಮುನ್ನಡೆ ಸಾಧಿಸಿದೆ.

Follow Us:
Download App:
  • android
  • ios