2015ರಲ್ಲಿ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಶ್ರೀಶಾಂತ್ ಅವರನ್ನು ಆರೋಪ ಮುಕ್ತಗೊಳಿಸಿದ್ದರೂ, ಬಿಸಿಸಿಐ ಮಾತ್ರ ಕೇರಳ ವೇಗಿಯ ನಿಷೇಧವನ್ನು ಹಿಂಪಡೆಯಲು ಒಪ್ಪಿರಲಿಲ್ಲ.

ಕೊಚ್ಚಿ(ಆ.08): ಮುಂಬರುವ 2019ರ ಏಕದಿನ ವಿಶ್ವಕಪ್‌'ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಆಸೆಯಿದೆ ಎಂದು ಕೇರಳ ವೇಗಿ ಶ್ರೀಶಾಂತ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಮವಾರವಷ್ಟೇ ಕೇರಳ ಹೈಕೋರ್ಟ್ ಶ್ರೀಶಾಂತ್ ಮೇಲಿನ ಆಜೀವ ನಿಷೇಧವನ್ನು ರದ್ದುಗೊಳಿಸಿತ್ತು. ಆದರೆ ಬಿಸಿಸಿಐ ಮಾತ್ರ ಈ ಸಂಬಂದ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಇದರ ಬೆನ್ನಲ್ಲೇ ಭಾರತ ತಂಡದ ಪರವಾಗಿ ಮತ್ತೆ ಆಡಬೇಕೆನ್ನುವ ಆಸೆಯನ್ನು ಶ್ರೀಶಾಂತ್ ಹೇಳಿಕೊಂಡಿದ್ದಾರೆ. ‘ತಂಡಕ್ಕೆ ಮರಳುವ ಸಾಮರ್ಥ್ಯ ತನ್ನಲ್ಲಿದೆ. ಇದಕ್ಕೆ ಬಿಸಿಸಿಐ ಹಾಗೂ ಕೇರಳ ಕ್ರಿಕೆಟ್ ಸಂಸ್ಥೆಗಳ ಸಹಕಾರ ಅಗತ್ಯ. ಕಳ್ಳಾಟದಲ್ಲಿ ತೊಡಗಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದ ಪಾಕ್‌ನ ಮೊಹಮದ್ ಅಮೀರ್ ಅವರಂತಹ ಆಟಗಾರರೇ ಟಿ20, ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುತ್ತಿದ್ದಾರೆ. ಇದಕ್ಕೆ ಐಸಿಸಿ ಹಾಗೂ ಸ್ಥಳೀಯ ಕ್ರಿಕೆಟ್ ಸಂಸ್ಥೆಗಳ ಸಹಕಾರವೇ ಕಾರಣ. ನನಗೂ ಇದೇ ರೀತಿ ಸಹಕಾರ ಅಗತ್ಯ’ ಎಂದು ಶ್ರೀಶಾಂತ್ ಹೇಳಿದ್ದಾರೆ.

2015ರಲ್ಲಿ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಶ್ರೀಶಾಂತ್ ಅವರನ್ನು ಆರೋಪ ಮುಕ್ತಗೊಳಿಸಿದ್ದರೂ, ಬಿಸಿಸಿಐ ಮಾತ್ರ ಕೇರಳ ವೇಗಿಯ ನಿಷೇಧವನ್ನು ಹಿಂಪಡೆಯಲು ಒಪ್ಪಿರಲಿಲ್ಲ. ಹೀಗಾಗಿ ಬಿಸಿಸಿಐ ನಿಲುವನ್ನು ಪ್ರಶ್ನಿಸಿ ಶ್ರೀಶಾಂತ್ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್‌ನಲ್ಲೂ ಶ್ರೀಶಾಂತ್ ಪರವಾಗಿ ತೀರ್ಪು ಬಂದಿದ್ದು, ಬಿಸಿಸಿಐ ಮುಂದಿನ ನಡೆ ಕುತೂಹಲ ಕೆರಳಿಸಿದೆ.