ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ತಂಡವು ಬಾಂಗ್ಲಾದೇಶ ಪ್ರವಾಸವನ್ನು ಕೈಗೊಳ್ಳುತ್ತಿದ್ದು, ಆ ವೇಳೆಗೆ ನೂತನ ನಾಯಕ ದ್ವೀಪ ರಾಷ್ಟ್ರದ ತಂಡವನ್ನು ಮುನ್ನಡೆಸಲಿದ್ದಾರೆ.

ಕೊಲಂಬೊ(ಜ.05): ಶ್ರೀಲಂಕಾ ಏಕದಿನ ಕ್ರಿಕೆಟ್ ತಂಡದ ನಾಯಕತ್ವವನ್ನು ತಿಸಾರ ಪೆರೇರಾ ಕಳೆದುಕೊಂಡಿದ್ದು, ಮುಂದಿನ ವಾರ ತಂಡಕ್ಕೆ ಹೊಸ ನಾಯಕನನ್ನು ನೇಮಕ ಮಾಡಲಾಗುವುದು ಎಂದು ಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೆರೇರಾ ಸ್ಥಾನವನ್ನು ಏಂಜೆಲೋ ಮ್ಯಾಥ್ಯೂಸ್ ಇಲ್ಲವೇ ದಿನೇಶ್ ಚಾಂಡಿಮಲ್ ತುಂಬಲಿದ್ದಾರೆ. ಇಬ್ಬರೂ ಸಹ ಈ ಹಿಂದೆ ಏಕದಿನ ತಂಡದ ನಾಯಕರಾಗಿದ್ದರು. ಭಾರತ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಸರಣಿ ವೇಳೆ ಪೆರೇರಾ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿತ್ತು.

ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ತಂಡವು ಬಾಂಗ್ಲಾದೇಶ ಪ್ರವಾಸವನ್ನು ಕೈಗೊಳ್ಳುತ್ತಿದ್ದು, ಆ ವೇಳೆಗೆ ನೂತನ ನಾಯಕ ದ್ವೀಪ ರಾಷ್ಟ್ರದ ತಂಡವನ್ನು ಮುನ್ನಡೆಸಲಿದ್ದಾರೆ.