ಸಿಎಸ್'ಕೆ: ತೀರ್ಪು ಕಾಯ್ದಿಟ್ಟ ಸುಪ್ರೀಂ
ನವದೆಹಲಿ(ಅ.04): ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಬೆಟ್ಟಿಂಗ್ ನಡೆಸಿದ ತಪ್ಪಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವನ್ನು ಎರಡು ವರ್ಷಗಳ ಕಾಲ ಐಪಿಎಲ್ನಿಂದ ನಿಷೇಧಿಸಿರುವುದರ ವಿರುದ್ಧ ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಕಾಯ್ದಿಟ್ಟಿದೆ.
2013ರ ಐಪಿಎಲ್ ಆವೃತ್ತಿಯಲ್ಲಿ ನಡೆದಿದ್ದ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸಿದ್ದ ಲೋಧಾ ಸಮಿತಿಯು ಸಿಎಸ್ಕೆ ತಂಡವನ್ನು 2 ವರ್ಷಗಳ ಕಾಲ ನಿಷೇಧಿಸಿತ್ತು.
ತಂಡದ ಮಾಲೀಕ ಎನ್. ಶ್ರೀನಿವಾಸನ್ ಇಲ್ಲವೇ ಆಟಗಾರರ ಮೇಲೆ ಯಾವುದೇ ಆರೋಪಗಳಿಲ್ಲದಿದ್ದರೂ ಸಿಎಸ್ಕೆಯನ್ನು ನಿಷೇಧಿಸಿದ್ದೇಕೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಪಾಲುದಾರರಾಗಿದ್ದ ಗುರುನಾಥ್ ಮೇಯಪ್ಪನ್, ರಾಜ್ ಕುಂದ್ರಾ ಬೆಟ್ಟಿಂಗ್'ನಲ್ಲಿ ತೊಡಗಿದ್ದು ಪತ್ತೆಯಾದ ಹಿನ್ನೆಲೆಯಲ್ಲಿ ಲೋಧ ಕಮಿಟಿ ಈ ಎರಡು ತಂಡವನ್ನು ನಿಷೇಧಿಸಿತ್ತು.