ವೆಸ್ಟ್ ಇಂಡೀಸ್ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದಿನ ಪಂದ್ಯಕ್ಕೆ ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

ಗಯಾನ(ಆ.06): ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ ಅಮೆರಿಕಾದಿಂದ ಕೆರಿಬಿಯನ್ ನಾಡಿಗೆ ಶಿಫ್ಟ್ ಆಗಿದೆ. ಆರಂಭಿಕ 2 ಪಂದ್ಯ ಗೆದ್ದು ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ 3ನೇ ಹಾಗೂ ಅಂತಿಮ ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡೋ ವಿಶ್ವಾಸದಲ್ಲಿದೆ. ಗಯಾನದಲ್ಲಿ ನಡೆಯುತ್ತಿರುವ ಅಂತಿಮ ಚುಟುಕು ಹೋರಾಟದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. 

Scroll to load tweet…

ರೋಹಿತ್ ಶರ್ಮಾ ಬದಲು ಕೆಎಲ್ ರಾಹುಲ್ ಸ್ಥಾನ ಪಡೆದರೆ, ರವೀಂದ್ರ ಜಡೇಜಾ ಬದಲು ರಾಹುಲ್ ಚಹಾರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇನ್ನು ಖಲೀಲ್ ಅಹಮ್ಮದ್ ಬದಲು ದೀಪಕ್ ಚಹಾರ್ ತಂಡ ಸೇರಿಕೊಂಡಿದ್ದಾರೆ. ಈ ಮೂಲಕ ಪಾಂಡ್ಯ ಸಹೋದರರ ಬಳಿಕ ಟೀಂ ಇಂಡಿಯಾಗೆ ಇದೀಗ ಚಹಾರ್ ಬ್ರದರ್ಸ್ ಎಂಟ್ರಿ ಕೊಟ್ಟಿದ್ದಾರೆ. 

Scroll to load tweet…

ಟಾಸ್‌ಗೂ ಮೊದಲು ಮಳೆ ಅಡ್ಡಿಯಾಗಿತ್ತು. ತುಂತುರ ಮಳೆ ಪಂದ್ಯದ ಫಲಿತಾಂಶ ಬದಲಿಸುವ ಸಾಧ್ಯತೆ ಹೆಚ್ಚಿದೆ. ಫ್ಲೋರಿಡಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್ ಗೆಲುವು ಸಾಧಿಸಿತ್ತು. ಇನ್ನು 2ನೇ ಪಂದ್ಯದಲ್ಲಿ ಡಕ್ವರ್ತ್ ನಿಯಮದನ್ವಯ 22 ರನ್ ಗೆಲುವು ಸಾಧಿಸಿತ್ತು. ಈ ಮೂಲಕ ಸರಣಿ ಗೆದ್ದುಕೊಂಡಿತು. ಇಂದಿನ ಪಂದ್ಯ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವುದರಿಂದ ತವರಿನ ತಂಡಕ್ಕೆ ಹೆಚ್ಚಿನ ಲಾಭವಿದೆ. ಆದರೆ ಗೆಲುವಿನ ಲಯದಲ್ಲಿರುವ ಕೊಹ್ಲಿ ಬಾಯ್ಸ, ಭರ್ಜರಿ ಗೆಲುವನ್ನು ಎದುರುನೋಡುತ್ತಿದೆ.