ದಾದಾ ಟೀಂ ಇಂಡಿಯಾ ನಾಯಕರಾಗಿದ್ದಾಗ ದುರ್ಗಾ ಪೂಜೆಗಾಗಿ ಸರ್ದಾರ್ ಜೀ ಆಗಿ ಬದಲಾಗಿದ್ದರು ಎಂಬ ಕುತೂಹಲಕಾರಿ ಅಂಶವೀಗ ಬಯಲಾಗಿದೆ. ಈ ತಿಂಗಳಾಂತ್ಯದಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿರುವ ಸೌರವ್ ಗಂಗೂಲಿ ಬರೆದ "ಎ ಸೆಂಚುರಿ ಈಸ್ ನಾಟ್ ಎನಾಫ್" ಪುಸ್ತಕದಲ್ಲಿ ಇಂತಹ ಹತ್ತು ಹಲವು ಸ್ವಾರಸ್ಯಕರ ಘಟನೆಗಳನ್ನು ಅನಾವರಣ ಮಾಡಿದ್ದಾರೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ವೃತ್ತಿ ಜೀವನದಲ್ಲಿ ಸಾಕಷ್ಟು ಪಾತ್ರಗಳನ್ನು ನಿಭಾಯಿಸಿದ್ದಾರೆ. 12ನೇ ಆಟಗಾರನಾಗಿ, ಆರಂಭಿಕ ಬ್ಯಾಟ್ಸ್'ಮನ್ ಆಗಿ, ಟೀಂ ಇಂಡಿಯಾದ ಯಶಸ್ವಿ ನಾಯಕನಾಗಿ, ಕ್ರಿಕೆಟ್ ಆಡಳಿತಾಧಿಕಾರಿಯಾಗಿರುವುದನ್ನು ನಾವು ನೋಡಿದ್ದೇವೆ. ಆದರೆ ಸರ್ದಾರ್'ಜೀ ಆಗಿದ್ದು..?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು, ದಾದಾ ಟೀಂ ಇಂಡಿಯಾ ನಾಯಕರಾಗಿದ್ದಾಗ ದುರ್ಗಾ ಪೂಜೆಗಾಗಿ ಸರ್ದಾರ್ ಜೀ ಆಗಿ ಬದಲಾಗಿದ್ದರು ಎಂಬ ಕುತೂಹಲಕಾರಿ ಅಂಶವೀಗ ಬಯಲಾಗಿದೆ. ಈ ತಿಂಗಳಾಂತ್ಯದಲ್ಲಿ ಮಾರುಕಟ್ಟೆಗೆ ಲಗ್ಗೆಯಿಡಲಿರುವ ಸೌರವ್ ಗಂಗೂಲಿ ಬರೆದ "ಎ ಸೆಂಚುರಿ ಈಸ್ ನಾಟ್ ಎನಾಫ್" ಪುಸ್ತಕದಲ್ಲಿ ಇಂತಹ ಹತ್ತು ಹಲವು ಸ್ವಾರಸ್ಯಕರ ಘಟನೆಗಳನ್ನು ಅನಾವರಣ ಮಾಡಿದ್ದಾರೆ.

ದಾದಾ ಒಮ್ಮೆ ದುರ್ಗಾಪೂಜೆಯ ಸಂದರ್ಭದಲ್ಲಿ ಸಿಖ್ ವೇಷ ಹಾಕಿದ್ದರಂತೆ. ಬಾಬುಘಾಟ್'ಗೆ ಹೋದಾಗ ಪೊಲೀಸ್ ಇನ್ಸ್'ಪೆಕ್ಟರ್ ದಾದಾರನ್ನು ಗುರುತಿಸಿ ಕಿರುನಗೆ ನಕ್ಕರಂತೆ. ಆದರೆ ವಿಷಯ ರಹಸ್ಯವಾಗಿಡಿ ಎಂದು ಹೇಳಿ ದರ್ಶನ ಮಾಡಿಕೊಂಡು ಬಂದಿದ್ದರಂತೆ. ಗಂಗೂಲಿ ಅವರಿಗೆ ಪತ್ನಿ ಡೋನಾ ಮೇಕ್'ಅಪ್ ಮಾಡಿದ್ದರಂತೆ. ದಾದಾ ಇನ್ನಷ್ಟು ಸ್ವಾರಸ್ಯಕರ ವಿಚಾರ ಪುಸ್ತಕ ಖರೀದಿಸಿಯೇ ತಿಳಿಯಬೇಕಿದೆ.

Scroll to load tweet…