ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟಿಸುವ ವೇಳೆಗೆ ಲೋಧಾ ಸಮಿತಿ ಶಿಫಾರಸುಗಳನ್ನು ಒಳಗೊಂಡ ಬಿಸಿಸಿಐನ ಸಂವಿಧಾನದ ಕರಡು ಪ್ರತಿಯನ್ನು ಸಿದ್ಧ ಪಡಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸುವಂತೆ ಸೂಚಿಸಿದೆ
ನವದೆಹಲಿ(ಸೆ.22): ಬಿಸಿಸಿಐನ ಕರಡು ಸಂವಿಧಾನ ವಿಚಾರದಲ್ಲಿ ಸೂಕ್ತ ಸಲಹೆಗಳನ್ನು ನೀಡದೆ ಹೋದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಬಿಸಿಸಿಐನ ಮೂವರು ಉನ್ನತ ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠ, ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟಿಸುವ ವೇಳೆಗೆ ಲೋಧಾ ಸಮಿತಿ ಶಿಫಾರಸುಗಳನ್ನು ಒಳಗೊಂಡ ಬಿಸಿಸಿಐನ ಸಂವಿಧಾನದ ಕರಡು ಪ್ರತಿಯನ್ನು ಸಿದ್ಧ ಪಡಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸುವಂತೆ ಸೂಚಿಸಿದೆ. ಸಂವಿಧಾನದ ಕರಡು ರಚನೆ ವಿಚಾರದಲ್ಲಿ ಮೊಂಡುತನ ತೋರಿಸುವುದು ಸರಿಯಲ್ಲ ಎಂದು ಬಿಸಿಸಿಐ ಅಧಿಕಾರಿಗಳಾದ ಸಿ.ಕೆ.ಖನ್ನಾ, ಅಮಿತಾಬ್ ಚೌಧರಿ ಹಾಗೂ ಅನಿರುದ್ಧ್ ಚೌಧರಿ ವಿರುದ್ಧ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅ.೨೩ರೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದೆ.
