ಹೈದರಾಬಾದ್ ಟೆಸ್ಟ್‌ನಲ್ಲಿ 10 ವಿಕೆಟ್ ಕಬಳಿಸಿ ಮಿಂಚಿದ ವೇಗಿ ಉಮೇಶ್ ಯಾದವ್ ಇದೀಗ  ಏಕದಿನ ತಂಡದಲ್ಲೂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆದರೆ ಶಾರ್ದೂಲ್ ಠಾಕೂರ್ ಬದಲು ಉಮೇಶ್ ಯಾದವ್‌ಗೆ ಸ್ಥಾನ ನೀಡಲಾಗಿದೆ.

ನವದೆಹಲಿ(ಅ.17): ಗಾಯಾಳು ಶಾರ್ದೂಲ್‌ ಠಾಕೂರ್‌ ಬದಲಿಗೆ ವೆಸ್ಟ್‌ಇಂಡೀಸ್‌ ವಿರುದ್ಧ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಿಗೆ, ಭಾರತ ತಂಡದಲ್ಲಿ ಉಮೇಶ್‌ ಯಾದವ್‌ಗೆ ಸ್ಥಾನ ನೀಡಲಾಗಿದೆ. ವಿಂಡೀಸ್‌ ವಿರುದ್ಧ 2ನೇ ಟೆಸ್ಟ್‌ನಲ್ಲಿ 10 ವಿಕೆಟ್‌ ಕಿತ್ತು ಮಿಂಚಿದ ಉಮೇಶ್‌ಗೆ ಅವಕಾಶ ದೊರೆತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಮೊದಲು ಪ್ರಕಟಗೊಂಡಿದ್ದ ತಂಡದಲ್ಲಿ ಶಾರ್ದೂಲ್‌ ಸ್ಥಾನ ಪಡೆದಿದ್ದರು. ಆದರೆ ಹೈದರಾಬಾದ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಕಾಲಿಟ್ಡ ಶಾರ್ದೂಲ್‌ ಕೇವಲ 10 ಎಸೆತ ಬೌಲ್‌ ಮಾಡಿ ತೊಡೆ ಸಂದು ಗಾಯಕ್ಕೆ ತುತ್ತಾಗಿದ್ದರು. 

Scroll to load tweet…

ಈ ವರ್ಷ ಜುಲೈನಲ್ಲಿ ಇಂಗ್ಲೆಂಡ್‌ ವಿರುದ್ಧ ಲಾರ್ಡ್ಸ್ನಲ್ಲಿ ನಡೆದಿದ್ದ ಪಂದ್ಯದ ಬಳಿಕ, ಉಮೇಶ್‌ ಏಕದಿನ ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಅ.21ರಂದು ಗುವಾಹಟಿಯಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.