ವಿಶಾಖಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಬಿಸಿಸಿಐ ಭಾರತದ 12 ದೇಸಿ ಅಂಪೈರ್‌'ಗಳಿಗೆ ಡಿಆರ್‌ಎಸ್ ಕಾರ್ಯಗಾರ ನಡೆಸುತ್ತಿದೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4ನೇ ಅಂಪೈರ್‌'ಗಳಾಗಿ ಕಾರ್ಯ ನಿರ್ವಹಿಸುವ ದೇಸಿ ಅಂಪೈರ್‌ಗಳು, ಐಪಿಎಲ್‌'ನಲ್ಲಿ ಮೈದಾನದ ಅಂಪೈರ್'ಗಳಾಗಿ ಕಾಣಿಸಿಕೊಳ್ಳಲಿದ್ದಾರೆ.

ವಿಶಾಖಪಟ್ಟಣ(ಡಿ.17): ಐಪಿಎಲ್ ಇತಿಹಾಸದಲ್ಲಿಯೇ ಬಿಸಿಸಿಐ ಮಹತ್ತರ ಬದಲಾವಣೆಯೊಂದು ಮಾಡಲು ಮುಂದಾಗಿದೆ.

Add Asianetnews Kannada as a Preferred SourcegooglePreferred

ಅಂಪೈರ್ ತೀರ್ಪು ಮೇಲ್ಮನವಿ ಪದ್ಧತಿ (ಡಿಆರ್‌'ಎಸ್) ಬಳಕೆಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದ ಬಿಸಿಸಿಐ, ಇದೀಗ ತನ್ನ ನಿಲುವನ್ನು ಬದಲಿಸಿದಂತಿದೆ. ಐಪಿಎಲ್'ನ 11ನೇ ಆವೃತ್ತಿಯಲ್ಲಿ ಡಿಆರ್‌'ಎಸ್ ಅಳವಡಿಸುವ ಸಾಧ್ಯತೆ ದಟ್ಟವಾಗಿದೆ.

ವಿಶಾಖಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಬಿಸಿಸಿಐ ಭಾರತದ 12 ದೇಸಿ ಅಂಪೈರ್‌'ಗಳಿಗೆ ಡಿಆರ್‌ಎಸ್ ಕಾರ್ಯಗಾರ ನಡೆಸುತ್ತಿದೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4ನೇ ಅಂಪೈರ್‌'ಗಳಾಗಿ ಕಾರ್ಯ ನಿರ್ವಹಿಸುವ ದೇಸಿ ಅಂಪೈರ್‌ಗಳು, ಐಪಿಎಲ್‌'ನಲ್ಲಿ ಮೈದಾನದ ಅಂಪೈರ್'ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಐಸಿಸಿ ಅಂಪೈರ್‌ಗಳ ಕೋಚ್ ಡೆನ್ನಿಸ್ ಬರ್ನ್ಸ್ ಹಾಗೂ ಅಂಪೈರ್ ಪಾಲ್ ರೈಫಲ್, ಶನಿವಾರ ಭಾರತದ ಕೋಚ್‌'ಗಳಿಗೆ ಡಿಆರ್‌'ಎಸ್ ಬಳಕೆ ಬಗ್ಗೆ ಮಾರ್ಗದರ್ಶನ ನೀಡಿದರು.

ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಐಪಿಎಲ್‌ನಲ್ಲಿ ಡಿಆರ್'ಎಸ್ ಅಳವಡಿಸುವ ದೃಷ್ಟಿಯಿಂದಲೇ ಈ ಕಾರ್ಯಗಾರ ಆಯೋಜಿಸಲಾಗಿದೆ. ತಂತ್ರಜ್ಞಾನ ಬಳಕೆಯಿಂದ ಕ್ರಿಕೆಟ್ ಆಟದ ಸೊಬಗನ್ನು ಹೆಚ್ಚಿಸಲು ಸಾಧ್ಯ. ತಂತ್ರಜ್ಞಾನದಲ್ಲಿ ಡಿಆರ್‌'ಎಸ್ ಸಹ ಒಂದು, ಎಂದು ಬಿಸಿಸಿಐ ಅಧಿಕಾರಿ ಹೇಳಿದ್ದಾರೆ.