ವಿಶ್ವಕಪ್ ಟೂರ್ನಿ ಆಯೋಜನೆಗೆ ಐಸಿಸಿ ಸಕಲ ಸಿದ್ಧತೆ ನಡೆಸಿದೆ. ಟೂರ್ನಿ ಯಶಸ್ವಿಯಾಗಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೀಗ ಪ್ರತಿ ತಂಡಕ್ಕೆ ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳನ್ನು ನೇಮಕ ಮಾಡಿದೆ.

ಲಂಡನ್‌(ಮೇ.15): ಐಸಿಸಿ ಏಕದಿನ ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿದ್ದು, ಟೂರ್ನಿ ವೇಳೆ ಭ್ರಷ್ಟಾಚಾರ ತಡೆಯಲು ಹೊಸ ಯೋಜನೆ ರೂಪಿಸಿದೆ. ಇದೇ ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಎಲ್ಲಾ 10 ತಂಡಗಳಿಗೆ ಪ್ರತ್ಯೇಕ ಭ್ರಷ್ಟಾಚಾರ ನಿಯಂತ್ರಣ ಅಧಿಕಾರಿಯನ್ನು ಐಸಿಸಿ ನೇಮಿಸಲಿದೆ ಎಂದು ವರದಿಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: ಧೋನಿ ವಿರುದ್ಧ ತಿರುಗಿ ಬಿದ್ರಾ ಕುಲ್ದೀಪ್ ಯಾದವ್?

ಅಭ್ಯಾಸ ಪಂದ್ಯದಿಂದ ಹಿಡಿದು ಟೂರ್ನಿ ಕೊನೆಗೊಳ್ಳುವ ವರೆಗೂ ಆ ಅಧಿಕಾರಿ ತಂಡದೊಂದಿಗೆ ಇರಲಿದ್ದಾರೆ. ಈ ಮೊದಲು ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಅಧಿಕಾರಿಗಳು ಇರುತ್ತಿದ್ದರು. ಆದರೆ ಈ ಬಾರಿ ಅಧಿಕಾರಿಗಳು ತಂಡದೊಂದಿಗೆ ಪ್ರಯಾಣಿಸಲಿದ್ದು, ಆಟಗಾರರು ಉಳಿದುಕೊಳ್ಳುವ ಹೋಟೆಲ್‌ನಲ್ಲೇ ಉಳಿದುಕೊಳ್ಳಲಿದ್ದಾರೆ. ಪಂದ್ಯಗಳ ನಡುವೆ ಅಭ್ಯಾಸ, ಪತ್ರಿಕಾಗೋಷ್ಠಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳ ವೇಳೆಯೂ ಆಟಗಾರರ ಜತೆ ಅಧಿಕಾರಿ ತೆರಳಲಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳು ಆಟಗಾರರನ್ನು ಭೇಟಿ ಮಾಡುವುದನ್ನು ತಪ್ಪಿಸಲು ಐಸಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಲಾಗಿದೆ.