ಟೀಂ ಇಂಡಿಯಾವು ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಯ್ಕೆ ಸಮಿತಿಯು ಸಮತೋಲನದಿಂದ ಕೂಡಿದ ತಂಡವನ್ನೇ ಪ್ರಕಟಿಸಿದ್ದು, ಈ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು(ಮೇ.08): ಸಾಕಷ್ಟು ಗೊಂದಲ-ವಿವಾದಗಳ ಬಳಿಕ ಬಿಸಿಸಿಐ ಆಯ್ಕೆ ಸಮಿತಿಯು ಚಾಂಪಿಯನ್ಸ್ ಟ್ರೋಫಿಗೆ 15 ಆಟಗಾರರನ್ನೊಳಗೊಂಡ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.
ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ತಂಡದಲ್ಲಿ ಸ್ಥಾನಪಡೆಯಲು ಕೆಲವು ಪ್ರತಿಭಾವಂತ ಕ್ರಿಕೆಟಿಗರು ವಿಫಲರಾಗಿದ್ದಾರೆ. ಐಪಿಎಲ್'ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿರುವ ಗಂಭೀರ್, ಉತ್ತಪ್ಪ ಹಾಗೂ ರೈನಾ ಸೇರಿದಂತೆ ಸಾಕಷ್ಟು ಮಂದಿ ಟೀಂ ಇಂಡಿಯಾಗೆ ಕಮ್'ಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದರು. ಟೀಂ ಇಂಡಿಯಾವು ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಯ್ಕೆ ಸಮಿತಿಯು ಸಮತೋಲನದಿಂದ ಕೂಡಿದ ತಂಡವನ್ನೇ ಪ್ರಕಟಿಸಿದ್ದು, ಈ ಬಗ್ಗೆ ಕ್ರಿಕೆಟ್ ಜಗತ್ತು ಪ್ರತಿಕ್ರಿಯಿಸಿದ್ದು ಹೀಗೆ...
