ಭಾರತದ ಅತ್ಯುತ್ತಮ ವಿಕೆಟ್ ಕೀಪರ್ ಯಾರು ಅನ್ನೋ ಪ್ರಶ್ನೆ ತಕ್ಷಣಕ್ಕೆ ಸಿಗೋ ಉತ್ತರ ಎಂ.ಎಸ್ ಧೋನಿ. ಕಳೆದ 5 ರಿಂದ 10ವರ್ಷಗಳ ಅವಧಿಯಲ್ಲಿ ವೃದ್ಧಿಮಾನ್ ಸಾಹ ಅತ್ಯುತ್ತಮ ವಿಕೆಟ್ ಕೀಪರ್ ಎಂದು ಮಾಜಿ ನಾಯಕ ಹೇಳಿದ್ದಾರೆ. 

ಕೊಲ್ಕತ್ತಾ(ನ.11): ಟೀಂ ಇಂಡಿಯಾ ಕ್ರಿಕೆಟ್‌ನಲ್ಲಿ ದಶಕಗಳ ಕಾಲ ವಿಕೆಟ್ ಕೀಪರ್ ಸಮಸ್ಯೆಯನ್ನ ನಿವಾರಿಸಿದ ಹೆಗ್ಗಳಿಕೆಗೆ ಎಂ.ಎಸ್ ಧೋನಿಗೆ ಸಲ್ಲಲಿದೆ. ಆದರೆ ಟೆಸ್ಟ್ ಕ್ರಿಕೆಟ್‌ಗೆ ಧೋನಿ ವಿದಾಯದ ಬಳಿಕ, ವೃದ್ಧಿಮಾನ್ ಸಾಹ ಭಾರತದ ಅತ್ಯುತ್ತಮ ವಿಕೆಟ್ ಕೀಪರ್ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಇಂಜುರಿಯಿಂದ ಚೇತರಿಸಿಕೊಳ್ಳುತ್ತಿರುವ ವೃದ್ಧಿಮಾನ ಸಾಹ ಶೀಘ್ರದಲ್ಲೇ ತಂಡಕ್ಕೆ ವಾಪಾಸ್ಸಾಗಲಿದ್ದಾರೆ. ಭುಜದ ನೋವಿನಿಂದ ವೃದ್ಧಿಮಾನ್ ಸಾಹ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಹೀಗಾಗಿ ಯುವ ವಿಕೆಟ್ ಕೀಪರ್ ರಿಷಬ್ ಪಂತ್‌ಗೆ ಅವಕಾಶ ಸಿಕ್ಕಿದೆ.

ಕಳೆದ 5 ರಿಂದ 10 ವರ್ಷ ವೃದ್ಧಿಮಾನ್ ಸಾಹ ಕೀಪಿಂಗ್ ಜವಾಬ್ದಾರಿಯನ್ನ ಅತ್ಯುತ್ತಮವಾಗಿ ನಿರ್ವಹಿಸುತ್ತಾರೆ. 2014ರಿಂದ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಖಾಯ ಸ್ಥಾನ ಪಡೆದ ಸಾಹ ಶ್ರೇಷ್ಠ ವಿಕೆಟ್ ಕೀಪರ್ ಆಗಿ ಹೊರಹೊಮ್ಮಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ.

32 ಟೆಸ್ಟ್ ಪಂದ್ಯದಿಂದ 1164 ರನ್ ಸಿಡಿಸಿರುವ ಸಾಹ 3 ಶತಕ ಕೂಡ ಭಾರಿಸಿದ್ದಾರೆ. ಈ ಮೂಲಕ ಬ್ಯಾಟಿಂಗ್‌ನಲ್ಲೂ ಉಪಯುಕ್ತ ಕಾಣಿಕೆ ನೀಡಿದ್ದಾರೆ. ಹೀಗಾಗಿ ಸಾಹ ಶೀಘ್ರವೇ ತಂಡಕ್ಕೆ ಕಮ್‌ಬ್ಯಾಕ್ ಮಾಡಬೇಕಿದೆ ಎಂದು ಗಂಗೂಲಿ ಹೇಳಿದ್ದಾರೆ.