ರಣಜಿಯಲ್ಲಿ ದ್ವಿಶತಕ ಸಿಡಿಸಿದರೂ ಯುವಿಗೆ ಸ್ಥಾನ ಕೊಡದೆ ಒಂದೂ ರಣಜಿ ಪಂದ್ಯವನ್ನ ಆಡದ ಹಾರ್ದಿಕ್ ಪಾಂಡ್ಯಗೆ ಅವಕಾಶ ಕಲ್ಪಿಸಿರೋದು ಯುವಿ ಅಭಿಮಾನಿಗಳಲ್ಲಿ ಆಕ್ರೋಶ ಮನೆಮಾಡಿದೆ.
ಮುಂಬೈ(ನ.03): ನಿನ್ನೆ ಇಂಗ್ಲೆಂಡ್ ವಿರುದ್ಧದ ಸರಣಿಗೆ ಹಾರ್ದಿಕ್ ಪಾಂಡ್ಯರನ್ನ ಆಯ್ಕೆ ಮಾಡಿರುವುದಕ್ಕೆ ಯುವರಾಜ್ ಸಿಂಗ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಣಜಿಯಲ್ಲಿ ದ್ವಿಶತಕ ಸಿಡಿಸಿದರೂ ಯುವಿಗೆ ಸ್ಥಾನ ಕೊಡದೆ ಒಂದೂ ರಣಜಿ ಪಂದ್ಯವನ್ನ ಆಡದ ಹಾರ್ದಿಕ್ ಪಾಂಡ್ಯಗೆ ಅವಕಾಶ ಕಲ್ಪಿಸಿರೋದು ಯುವಿ ಅಭಿಮಾನಿಗಳಲ್ಲಿ ಆಕ್ರೋಶ ಮನೆಮಾಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅಭಿಮಾನಿಗಳು ಆಯ್ಕೆ ಸಮಿತಿ ವಿರುದ್ಧ ಕಿಡಿ ಕಾರಿದ್ದಾರೆ. ಆದರೆ ಆಯ್ಕೆ ಸಮಿತಿ ಪಾಂಡ್ಯರ ಆಯ್ಕೆಯನ್ನ ಸಮರ್ಥಿಸಿಕೊಂಡಿದೆ.
