Asianet Suvarna News Asianet Suvarna News

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಕೊಟ್ಟ ಯಡಿಯೂರಪ್ಪ ಸರ್ಕಾರ

ಕೊರೋನಾ ಆರ್ಭಟದ ನಡುವೆ ರಾಜ್ಯ ಸರ್ಕಾರಿ ನೌಕರರರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕಾರ ಸಿಹಿಸುದ್ದಿ ನೀಡಿದೆ.

Karnataka Govt employees Work 5 Days In a week
Author
Bengaluru, First Published Jun 27, 2020, 8:31 PM IST

ಬೆಂಗಳೂರು, (ಜೂನ್.27) : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ವಾರದಲ್ಲಿ 5  ದಿನ ಮಾತ್ರ ಕೆಲಸ ಮಾಡಬಹುದು. 

ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ಭಾಗ್ಯ ಸಿಗಲಿದೆ. 

ವಾರದಲ್ಲಿ 1 ದಿನ ಮದ್ಯ ಸಿಗಲ್ಲ, ಆ ಒನ್ ಡೇ ಕುಡುಕರು ಶಾಂತತೆಯಿಂದ ಇರ್ಬೇಕು..!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್ ಹೆಚ್ಚಾಗುತ್ತಿರುವುದರಿಂದ ಜುಲೈ 5ರಿಂದ ಪ್ರತಿ ಭಾನುವಾರ ಲಾಕ್‌ಡೌನ್‌ ಮಾಡಲು ಸರ್ಕಾರ ತೀರ್ಮಾನಿಸಿದೆ.  ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಅಲ್ಲದೇ  ಪ್ರತಿ ಶನಿವಾರ ಹಾಗೂ ಭಾನುವಾರ ರಾಜ್ಯ ಸರ್ಕಾರಿ ನೌಕರರಿಗೆ ರಜೆ ನೀಡಿದ್ದು, ಇದರಿಂದ ನೌಕರರಿಗೆ ರಿಲೀಫ್ ಸಿಕ್ಕಂತಾಗಿದೆ.

Follow Us:
Download App:
  • android
  • ios