ನೆಲಮಂಗಲದಲ್ಲಿ, ಬೆಂಗಳೂರಿನ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಪೊಲೀಸರು ಜಂಟಿಯಾಗಿ ರಕ್ಷಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ವಾಹನ ತಡೆದು, ಗೋವುಗಳನ್ನು ರಕ್ಷಿಸಲಾಗಿದ್ದು, ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ (.28):ರಾಜಧಾನಿ ಬೆಂಗಳೂರು ನಗರಕ್ಕೆ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 10 ಗೋವುಗಳನ್ನು ನೆಲಮಂಗಲದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಟೌನ್ ಪೊಲೀಸರು ಜಂಟಿಯಾಗಿ ರಕ್ಷಿಸಿದ್ದಾರೆ.

Add Asianetnews Kannada as a Preferred SourcegooglePreferred

ಖಚಿತ ಮಾಹಿತಿ ಮೇರೆಗೆ, ನೆಲಮಂಗಲ ಟೌನ್ ಪೊಲೀಸರ ನೆರವಿನೊಂದಿಗೆ ಶ್ರೀರಾಮ ಸೇನೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಕುದೂರು ಮೂಲಕ ಬೆಂಗಳೂರು ನಗರದತ್ತ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದಿದ್ದಾರೆ.

ಹತ್ತು ಗೋವುಗಳು ರಕ್ಷಣೆ:

ಈ ಜಾನುವಾರುಗಳನ್ನು ಗೂಡ್ಸ್ ವಾಹನದಲ್ಲಿ ತುಂಬಿಸಿಕೊಂಡು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ದ್ಯ ರಕ್ಷಿಸಲಾದ 10 ಗೋವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಕ್ರಮ ಸಾಗಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.