Asianet Suvarna News Asianet Suvarna News

ಬಸ್ ಮುಷ್ಕರ : ಸಾರಿಗೆ ನಿಗಮಗಳಿಗೆ 17 ಕೋಟಿ ರು. ನಷ್ಟ

ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಸ್ ಮುಷ್ಕರ ನಡೆದಿದ್ದು ಇದರಿಂದ ಸಾರಿಗೆ ಇಲಾಖೆಗೆ 17 ಕೋಟಿ ನಷ್ಟವಾಗಿದೆ. ಮೊದಲ ದಿನವೇ ಭಾರೀ ನಷ್ಟ ಉಂಟಾಗಿದೆ. 

17 Crore Loss to Transport department  Due to Karnataka Bus strike snr
Author
Bengaluru, First Published Apr 8, 2021, 7:21 AM IST

 ಬೆಂಗಳೂರು (ಏ.08):  ಸಾರಿಗೆ ನೌಕರರ ಮುಷ್ಕರದ ಮೊದಲ ದಿನವಾದ ಬುಧವಾರ ಬಸ್‌ಗಳು ರಸ್ತೆಗೆ ಇಳಿಯದ ಪರಿಣಾಮನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಸುಮಾರು 17 ಕೋಟಿ ರು. ಆದಾಯ ಖೋತಾ ಆಗಿದೆ. ಕೊರೋನಾದಿಂದ ಪ್ರಯಾಣಿಕರ ಸಂಖ್ಯೆ ಕುಸಿತವಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಾರಿಗೆ ನಿಗಮಗಳಿಗೆ ಈ ಮುಷ್ಕರವೂ ದೊಡ್ಡ ಹೊಡೆತ ನೀಡಿದೆ.

4 ನಿಗಮಗಳ ಒಟ್ಟು 22 ಸಾವಿರ ಬಸ್‌ಗಳ ಪೈಕಿ ಕೇವಲ 430 ಬಸ್‌ಗಳು ಮಾತ್ರ ಪೊಲೀಸ್‌ ಭದ್ರತೆಯಲ್ಲಿ ಕೆಲ ಕಾಲ ಕಾರ್ಯಾಚರಣೆ ನಡೆಸಿವೆ. ಹೀಗಾಗಿ ಕೆಎಸ್‌ಆರ್‌ಟಿಸಿಗೆ ದಿನದ ಆದಾಯ ಸುಮಾರು 7.50 ಕೋಟಿ ರು., ಬಿಎಂಟಿಸಿಗೆ ಸುಮಾರು 3 ಕೋಟಿ ರು., ಈಶಾನ್ಯ ಸಾರಿಗೆ ನಿಗಮ ಹಾಗೂ ವಾಯುವ್ಯ ಸಾರಿಗೆ ನಿಗಮಕ್ಕೆ ತಲಾ ಸುಮಾರು 3.50 ಕೋಟಿ ರು. ಆದಾಯ ನಷ್ಟವಾಗಿದೆ ಎಂದು ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸಾರಿಗೆ ಮುಷ್ಕರ; ಮಾತುಕತೆಗೆ ಬಿಎಸ್‌ ಯಡಿಯೂರಪ್ಪ ಆಹ್ವಾನ ...

ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ಮುಂದುವರಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಗುರುವಾರವೂ ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯುವುದಿಲ್ಲ, ಹೀಗಾಗಿ ಸಾರಿಗೆ ನಿಗಮಗಳಿಗೆ ಆರ್ಥಿಕ ಸ್ಥಿತಿ ಮತ್ತಷ್ಟುಬಿಗಡಾಯಿಸಲಿದೆ.

Follow Us:
Download App:
  • android
  • ios