ಸ್ಯಾಂಡಲ್ ವುಡ್ ನಿರ್ಮಾಪಕ ಶೈಲೆಂದ್ರ ಬಾಬುಗೆ ವ್ಯಕ್ತಿಯೋರ್ವ ಕೊಟ್ಯಂತರ ರು. ವಂಚನೆ ಮಾಡಿದ್ದು, ಕೊಟ್ಟ ಹಣವನ್ನು ಮರಳಿ ಕೇಳಿದ್ರೆ ಜೀವ ಬೆದರಿಕೆ ಒಡ್ಡಿದ್ದಾರೆ. 

ಬೆಂಗಳೂರು : ಸ್ಯಾಂಡಲ್ ವುಡ್ ನಿರ್ಮಾಪಕ ಶೈಲೆಂದ್ರ ಬಾಬುಗೆ ಕೋಟಿ ಕೋಟಿ ವಂಚನೆ ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿ.ಎಚ್.ಬಸವರಾಜು ಎನ್ನುವ ವ್ಯಕ್ತಿ ಖ್ಯಾತ ನಿರ್ಮಾಪಕ ಶೈಲೇಂದ್ರ ಬಾಬುಗೆ ವಂಚನೆ ಮಾಡಿದ್ದಾರೆ. ಆಸ್ತಿ ಖರೀದಿ ಮಾಡಬೇಕು ಎಂದು ಬಾಬು ಬಳಿ ಬಸವರಾಜು 2 ಕೋಟಿ ರು. ಸಾಲ ಪಡೆದಿದ್ದರು. ಬಳಿಕ ಕೊಟ್ಟ ಹಣವನ್ನು ಮರಳಿ ಕೇಳಿದರೆ ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ. 

ಹಣ ವಾಪಸು ಕೇಳಿದರೆ ನಿನ್ನನ್ನು ಮುಗಿಸುವುದಾಗಿ ಬಸವರಾಜು ಸಹಚರರು ಬೆದರಿಕೆ ಹಾಕಿದ್ದಾರೆ. 

ಈ ಹಿನ್ನಲೆಯಲ್ಲಿ ಶೈಲೇಂದ್ರ ಬಾಬು ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಐಪಿಸಿ 506, 420 ಹಾಗೂ 34 ರ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.