ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ತಲಾ ₹25 ಕೋಟಿಗಳಂತೆ 225 ಕೋಟಿ ಅನುದಾನ ನೀಡಲು ಸಭೆಯಲ್ಲಿ ಒಪ್ಪಿಗೆ ದೊರಕಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು(ಮಾ.01): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಒಂಬತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ ₹25 ಕೋಟಿಗಳ ಭರ್ಜರಿ ಅನುದಾನ ನೀಡಲು ಅನುಮೋದನೆ ಸಿಕ್ಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ತಲಾ ₹25 ಕೋಟಿಗಳಂತೆ 225 ಕೋಟಿ ಅನುದಾನ ನೀಡಲು ಸಭೆಯಲ್ಲಿ ಒಪ್ಪಿಗೆ ದೊರಕಿದೆ ಎಂದು ತಿಳಿದು ಬಂದಿದೆ.
ಸಚಿವರಾಗಿರುವವರ ಕ್ಷೇತ್ರಗಳನ್ನು ಹೊರತು ಪಡಿಸಿಉಳಿದಶಿವಾಜಿನಗರ, ಗೋವಿಂದರಾಜನಗರ, ವಿಜಯನಗರ, ಪುಲಕೇಶಿನಗರ, ಶಾಂತಿನಗರ ಸೇರಿದಂತೆ ಒಟ್ಟು ಒಂಬತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ಅನುದಾನ ನೀಡಲು ಸಭೆಯಲ್ಲಿ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ.

ವಿಶ್ವವಿದ್ಯಾಲಯಗಳಿಗೆ ₹3600 ಕೋಟಿ ಅನುದಾನ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಹಾಗೂ ಪ್ರಸನ್ನ ಕುಮಾರ್ ಬ್ಲಾಕ್ ಆವರಣದಲ್ಲಿ ಒಟ್ಟು 43 ಎಕರೆ ಜಮೀನಿನಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ ಕಟ್ಟಡ, ಕ್ರೀಡಾ ಕಟ್ಟಡ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ₹168.63 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುದೋದನೆ ಸಚಿವ ಸಂಪುಟ ಸಭೆಯಲ್ಲಿ ದೊರಕಿದೆ ಎಂದು ತಿಳಿದು ಬಂದಿದೆ.