2018ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿ 186 ಕೋಟಿ ರು.ನಷ್ಟುಹೆಚ್ಚು ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 2018ರಲ್ಲಿ ನಗದು 94.3 ಕೋಟಿ ರು. ವಶಪಡಿಸಿಕೊಂಡಿದ್ದರೆ, ಈಗ 109 ಕೋಟಿ ರು. ನಗದು ಜಪ್ತಿ.
ಬೆಂಗಳೂರು(ಏ.30): .ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ತನಿಖಾ ಸಂಸ್ಥೆಗಳು ಚುನಾವಣಾ ನೀತಿ ಸಂಹಿತೆ ಘೋಷಣೆಯಾದ ಬಳಿಕ ಈವರೆಗೆ ವಶಪಡಿಸಿಕೊಂಡ ನಗದು, ಮದ್ಯ ಸೇರಿದಂತೆ ಇತರೆ ವಸ್ತುಗಳ ಮೌಲ್ಯವು 300 ಕೋಟಿ ರು. ದಾಟಿದೆ.
2018ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿ 186 ಕೋಟಿ ರು.ನಷ್ಟುಹೆಚ್ಚು ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 2018ರಲ್ಲಿ ನಗದು 94.3 ಕೋಟಿ ರು. ವಶಪಡಿಸಿಕೊಂಡಿದ್ದರೆ, ಈಗ 109 ಕೋಟಿ ರು. ನಗದನ್ನು ಜಪ್ತಿ ಮಾಡಲಾಗಿದೆ.
Karnataka Assembly Elections 2023: ಚುನಾವಣಾ ಅಕ್ರಮ ತಡೆಗೆ ಮೊಬೈಲ್ ಸ್ಕ್ವಾಡ್
ಶನಿವಾರ 6.24 ಕೋಟಿ ರು. ನಗದನ್ನು ಜಪ್ತಿ ಮಾಡಲಾಗಿದೆ. ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಐದು ಕೋಟಿ ರು. ನಗದು ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ 30 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 109.14 ಕೋಟಿ ರು. ನಗದು, 22.14 ಕೋಟಿ ರು. ಮೌಲ್ಯದ ಉಚಿತ ಕೊಡುಗೆಗಳನ್ನು ಜಪ್ತಿ ಮಾಡಲಾಗಿದೆ. 72.70 ಕೋಟಿ ರು. ಮೌಲ್ಯದ 19.10 ಲಕ್ಷ ಲೀಟರ್ ಮದ್ಯ, 18.29 ಕೋಟಿ ರು. ಮೌಲ್ಯದ 1,438 ಕೆಜಿ ಮಾದಕ ವಸ್ತುಗಳು, 76.05 ಕೋಟಿ ರು. ಮೌಲ್ಯದ 149.42 ಕೆಜಿ ಚಿನ್ನ, 4.44 ಕೋಟಿ ರು. ಮೌಲ್ಯದ 637.94 ಕೆಜಿ ಬೆಳ್ಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಒಟ್ಟು 80.49 ಕೋಟಿ ರು. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 302.78 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.
2,288 ಎಫ್ಐಆರ್, 69,819 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಗಿ ರದ್ದುಪಡಿಸಲಾಗಿದೆ. ಸಿಆರ್ಪಿಸಿ ಕಾಯ್ದೆಯಡಿ 5,422 ಪ್ರಕರಣಗಳನ್ನು ದಾಖಲಿಸಲಾಗಿದೆ. 9,896 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 15,182 ಜಾಮೀನು ರಹಿತ ವಾರೆಂಟ್ಗಳನ್ನು ಜಾರಿಗೊಳಿಸಲಾಗಿದೆ ಎಂದಿದೆ.
