ರಾಜ್ಯಕ್ಕೆ ಜೂನ್ 3 ರಂದು ಮುಂಗಾರು ಪ್ರವೇಶ ಜೂ. 2 ರಿಂದ 6  ರವರೆಗೆ ವ್ಯಾಪಕ ಮಳೆ ಹವಾಮಾನ ಇಲಾಖೆಯಿಂದ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು (ಜೂ.02):  ರಾಜ್ಯಕ್ಕೆ ಜೂನ್ 3 ರಂದು ಮುಂಗಾರು ಪ್ರವೇಶವಾಗಲಿದ್ದು, ಜೂ. 2 ರಿಂದ 6 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆ ಕರ್ನಾಟಕ ,ಕೇರಳ, ಕರಾವಳಿಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು ಭಾರಿ ಮಳೆಯಾಗಲಿದ್ದು, ಜೂನ್ 2, 3 ಹಾಗೂ 4 ರಂದು ಯೆಲ್ಲೋ ಅಲರ್ಟ್( ಹವಾಮಾನ ಅಪಾಯಕಾರಿಯಾಗಿದ್ದು ಎಚ್ಚರಿಕೆಯಿಂದರಬೇಕೆಂದು ನೀಡುವ ಪ್ರಾಥಮಿಕ ಹಂತದ ಮುನ್ಸೂಚನೆ) ಘೋಷಣೆ ಮಾಡಲಾಗಿದೆ.

ಜೂ.3ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂಗಾರು ಪೂರ್ವ ಭಾರೀ ಮಳೆ

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಬೆಳಗಾವಿ, ಧಾರವಾಡ, ಬಿಜಾಪುರ್, ಬಾಗಲಕೋಟೆ , ಕಲ್ಬುರ್ಗಿ, ಬೀದರ್, ಯಾದಗಿರಿ , ರಾಯಚೂರು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಜೂನ್ 3 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಹೇಳಿದ್ದಾರೆ.