ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರು 40 ವರ್ಷಗಳಿಂದ ಬಸ್ ಸೌಲಭ್ಯವಿಲ್ಲದ ವಡೇರಹಳ್ಳಿ ಮತ್ತು ಕಳವೂರು ಗ್ರಾಮಗಳಿಗೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸ್ವತಃ ತಾವೇ ಬಸ್ ಚಲಾಯಿಸಿಕೊಂಡು ಬರುವ ಮೂಲಕ ಈ ಸೇವೆಗೆ ಚಾಲನೆ ನೀಡಿದ್ದು, ಇದು ಗ್ರಾಮಸ್ಥರು ಮತ್ತು ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸಿದೆ.

ದಾವಣಗೆರೆ (ನ.9): 40 ವರ್ಷಗಳಿಂದ ಸರ್ಕಾರಿ ಬಸ್ಸೇ ಕಾಣದ ಊರಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಶನಿವಾರ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿ, ತಾವೇ ಬಸ್‌ ಚಲಾಯಿಸಿಕೊಂಡು ಬರುವ ಮೂಲಕ ವಡೇರಹಳ್ಳಿ, ಕಳವೂರು ಗ್ರಾಮಸ್ಥರ 4 ದಶಕಗಳ ಬೇಡಿಕೆ ಈಡೇರಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ವತಃ ಬಸ್ ಚಲಾಯಿಸಿದ ಶಾಸಕ

ಮಾಯಕೊಂಡ ವ್ಯಾಪ್ತಿಯ ವಡೇರಹಳ್ಳಿ ಮತ್ತು ಕಳವೂರು ಗ್ರಾಮಗಳಿಗೆ ಇತಿಹಾಸದಲ್ಲಿಯೇ ರಾಜ್ಯ ರಸ್ತೆ ಸಾರಿಗೆ ಬಸ್ ಸೌಲಭ್ಯ ಇರಲಿಲ್ಲ. ಹಲವಾರು ವರ್ಷಗಳಿಂದ ಗ್ರಾಮಸ್ಥರು ಬಸ್‌ಗಾಗಿ ಬೇಡಿಕೆ ಇಟ್ಟಿದ್ದರು. ಶಾಸಕ ಕೆ.ಎಸ್.ಬಸವಂತಪ್ಪ ಅವರು ಶನಿವಾರ ಈ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಿದ್ದು, ಸ್ವತಃ ಬಸ್ ಚಲಾಯಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಶಾಲಾ ಮಕ್ಕಳು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

ಯಾವ್ಯಾವ ಗ್ರಾಮಳಿಗೆ ಸಂಚರಿಸುತ್ತೆ?

ಈ ಬಸ್‌ ಪ್ರತಿನಿತ್ಯ ದಾವಣಗೆರೆ- ಕಳವೂರು- ವಡೇರಹಳ್ಳಿ- ಮಾಯಕೊಂಡ- ಹುಚ್ಚವ್ವನಹಳಿ- ಬಸಾಪುರ- ಗಂಜಿಗಟ್ಟೆ ಗ್ರಾಮಗಳ ಮಾರ್ಗದಲ್ಲಿ ಸಂಚರಿಸಿ ಪುನಃ ಇದೇ ಮಾರ್ಗದಲ್ಲಿ ದಾವಣಗೆರೆಗೆ ವಾಪಸ್‌ ಬರಲಿದೆ. ಇದರಿಂದಾಗಿ ಮಕ್ಕಳು ಶಾಲೆಗಳಿಗೆ ಹಾಗೂ ಗ್ರಾಮಸ್ಥರು ನಗರ ಪ್ರದೇಶಗಳಿಗೆ ಹೋಗಿ ಬರಲು ಅನುಕೂಲವಾಗಲಿದೆ.