* ಕರ್ನಾಟಕದಲ್ಲಿ ಕೊರೋನಾ ಮತ್ತಷ್ಟು ಇಳಿಕೆ* ಇಂದು (ಸೆ.14) 559 ಜನರಿಗೆ ಕೋವಿಡ್ ಸೋಂಕು, 12 ಜನರು ಬಲಿ * ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ

ಬೆಂಗಳೂರು, (ಸೆ.14): ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗುತ್ತಿದೆ. ಆದರೂ ನಾವು ಎಚ್ಚರದಿಂದ ಇರೋಣ. 

Add Asianetnews Kannada as a Preferred SourcegooglePreferred

ಇಂದು (ಸೆ.14) ಮತ್ತಷ್ಟು ಕೊರೋನಾ ಇಳಿಕೆಯಗಿದ್ದು, ರಾಜ್ಯದಲ್ಲಿ 559 ಜನರಿಗೆ ಕೋವಿಡ್ ಸೋಂಕು ತಗುಲಿದೆ. 12 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, 1034 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊರೋನಾ 3ನೇ ಅಲೆ ಆತಂಕದ ಮಧ್ಯೆ ನೆಮ್ಮದಿ ಸುದ್ದಿ

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,62,967ಕ್ಕೆ ಏರಿಕೆಯಾಗಿದ್ರೆ, . ಇದುವರೆಗೆ 37,529 ಜನ ಮೃತಪಟ್ಟಿದ್ದಾರೆ. ಇನ್ನು 29,09,656 ಮಂದಿ ಗುಣಮುಖರಾಗಿದ್ದಾರೆ. 15754 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಮಂಗಳವಾರ ಹೊಸದಾಗಿ 231 ಜನರಿಗೆ ಸೋಂಕು ತಗುಲಿದ್ದು, 4 ಜನ ಮೃತಪಟ್ಟಿದ್ದಾರೆ. 302 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 7,136 ಸಕ್ರಿಯ ಪ್ರಕರಣಗಳಿವೆ.